- Advertisement -
- Advertisement -
ಮಂಗಳೂರು: ಖಾಸಗಿ ಕಾಲೇಜಿನಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ರ್ಯಾಗಿಂಗ್ ಮಾಡುತ್ತಿದ್ದ ಆರೋಪದಡಿ 11 ಕೇರಳ ಮೂಲದ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಳ್ಳಾಲದ ನಾಟಕಲ್’ನ ಕಾಲೇಜಿನ ಫಿಸಿಯೋಥೆರಪಿ ಮತ್ತು ನರ್ಸಿಂಗ್ ಶಿಕ್ಷಣ ಪಡೆಯುತ್ತಿದ್ದ ಐವರು ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ನಡೆಸಿದ್ದರು. ಗಡ್ಡ- ಮೀಸೆ ಬೋಳಿಸಬೇಕು, ಪೊಟ್ಟಣದಲ್ಲಿರುವ ಬೆಂಕಿ ಕಡ್ಡಿಗಳನ್ನು ಎಣಿಸಬೇಕು ಎಂಬ ಷರತ್ತು ಹಾಕಿ ಕಿರುಕುಳ ನೀಡಿದ್ದರು.
ಕೆಲವು ವಿದ್ಯಾರ್ಥಿಗಳು ಪ್ರತಿರೋಧ ತೋರಿದಾಗ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಉಳ್ಳಾಲ ಠಾಣೆಗೆ ದೂರು ನೀಡಿದ್ದರು.
ಮೊಹಮ್ಮದ್ ಶಮಾಸ್, ಅವಿನ್ ಜೋಯ್, ರಾಬಿನ್ ಬಿಜು, ಜೆರಾನ್ ಸಿರಿಲ್, ಜಬಿನ್ ಮಹರೂಫ್, ಮೊಹಮ್ಮದ್ ಸೂರಜ್, ಜಫಿನ್, ಅಬ್ದುಲ್ ಬಸಿತ್, ಆಶಿನ್ ಬಾಬು, ಅಬ್ದುಲ್ ಅನಾಸ್ ಮೊಹಮ್ಮದ್, ಅಕ್ಷಯ್ ಕೆ.ಎಸ್ ಬಂಧಿತ ವಿದ್ಯಾರ್ಥಿಗಳು.
- Advertisement -