Monday, May 6, 2024
spot_imgspot_img
spot_imgspot_img

ಮಂಗಳೂರು: ರೈಲ್ವೆ ಹಳಿಯಿಂದ ಮಣ್ಣು ತೆರವು ಕಾರ್ಯಾಚರಣೆ ಪೂರ್ಣ; ಪುನರಾರಂಭಗೊಂಡ ರೈಲು ಸಂಚಾರ

- Advertisement -G L Acharya panikkar
- Advertisement -

ಮಂಗಳೂರು: ರೈಲ್ವೆ ಹಳಿಗೆ ತಡೆಗೋಡೆ ಸಹಿತ ಮಣ್ಣು ಕುಸಿದು ಬಿದ್ದು ನಗರ ಹೊರವಲಯದ ಕುಲಶೇಖರ ಬಳಿ ರೈಲು ಸಂಚಾರ ಸ್ಥಗಿತಗೊಂಡಿದ್ದು ಇದೀಗ ರವಿವಾರ ಬೆಳಗ್ಗಿನಿಂದ ಮತ್ತೆ ಪುನರಾರಂಭಗೊಂಡಿದೆ.

ರೈಲ್ವೆ ಹಳಿ ಮೇಲೆ ಬಿದ್ದ ಕಲ್ಲುಮಣ್ಣನ್ನು ತೆರವುಗೊಳಿಸುವ ಕಾರ್ಯಾಚರಣೆ ಶನಿವಾರ ತಡರಾತ್ರಿಯವರೆಗೂ ನಡೆದಿದ್ದು, ಹಿಟಾಚಿ ಸಹಾಯದಿಂದ ತಡೆಗೋಡೆ ಕುಸಿತಗೊಂಡ ಸ್ಥಳದಿಂದ ಮಣ್ಣು, ಬೃಹತ್ ಗಾತ್ರದ ಕಲ್ಲುಗಳನ್ನು ತೆರವುಗೊಳಿಸಲಾಯಿತು. ರೈಲ್ವೆ ಹಳಿಗೆ ವಾಲಿದ ತಡೆಗೋಡೆಯನ್ನು ಯಂತ್ರ ಬಳಸಿ ತುಂಡರಿಸಿ ತೆಗೆಯಲಾಯಿತು.

ಪಾಲ್ಘಾಟ್ ರೈಲ್ವೇ ವಿಭಾಗಕ್ಕೆ ಬರುವ ಈ ಹಳಿಯಲ್ಲಿ ಜು.18ರಿಂದ ರೈಲು ಸಂಚಾರ ಪುನಾರಂಭಿಸಲಾಗುವುದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದು, ಅದರಂತೆ ಇಂದು ಬೆಳಗ್ಗೆ 8:45ರ ಸುಮಾರಿಗೆ ಎರ್ನಾಕುಲಂನಿಂದ ಅಜ್ಮೀರ್‌ಗೆ ಮೊದಲ ರೈಲು ಪ್ರಯಾಣ ಬೆಳೆಸಿದೆ.

- Advertisement -

Related news

error: Content is protected !!