- Advertisement -
- Advertisement -
ಮಂಗಳೂರು : ವಿವಿ ಕಾಲೇಜಿನ ನಿವೃತ್ತ ಉಪನ್ಯಾಸಕ ಹಾಗೂ ಖ್ಯಾತ ಚಿಂತಕ ಪ್ರೊ. ಹೆಚ್.ಪಟ್ಟಾಭಿರಾಮ ಸೋಮಯಾಜಿ ಅವರು ನಿಧನರಾಗಿದ್ದಾರೆ.
ಇಂಗ್ಲಿಷ್ ಪ್ರಾಧ್ಯಾಪಕ ಎಚ್ ಪಟ್ಟಾಭಿರಾಮ ಸೋಮಯಾಜಿ ಅವರು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಸುಮಾರು ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ. ನಗರದ ದೇರೇಬೈಲು ಕೊಂಚಾಡಿಯ ಗಿರಿನಗರದಲ್ಲಿರುವ ಮನೆಯಲ್ಲಿ ಒಂಟಿಯಾಗಿದ್ದ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಪಟ್ಟಾಭಿರಾಮ ಸೋಮಯಾಜಿ ಅವರು ಕೋಮು ಸೌಹಾರ್ದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದು, ಮಂಗಳೂರಿನಲ್ಲಿ ನಡೆದ ಪಬ್ ದಾಳಿಯ ನಂತರ ಅವರು ರಾಮಸೇನೆಯನ್ನು ‘ರಾವಣ ಸೇನೆ’ ಎಂದು ಕರೆದಿದ್ದು, ಈ ಹೇಳಿಕೆಯಿಂದ ನಗರದಲ್ಲಿ ಪ್ರತಿಭಟನೆಗಳು ಕೂಡ ನಡೆದಿದ್ದವು.
- Advertisement -