Saturday, June 28, 2025
spot_imgspot_img
spot_imgspot_img

ಮಂಗಳೂರು: ಕಾರಿನಲ್ಲಿದ್ದ 6,80,000ರೂ. ಮೌಲ್ಯದ ಚಿನ್ನಾಭರಣ, ಲ್ಯಾಪ್ ಟಾಪ್ ಕಳವು; ಆರೋಪಿ ಅರೆಸ್ಟ್‌..!

- Advertisement -
- Advertisement -

ಮಂಗಳೂರು: ಪಾರ್ಕ್ ಮಾಡಿದ್ದ ಕಾರಿನ ಗ್ಲಾಸ್ ಒಡೆದು ಕಾರಿನೊಳಗಿದ್ದ 6,80,000ರೂ. ಮೌಲ್ಯದ ಚಿನ್ನಾಭರಣ, ಮತ್ತು ಲ್ಯಾಪ್ ಟಾಪ್ ಇರುವ ವ್ಯಾನಿಟ್ ಬ್ಯಾಗ್ ಅನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೂರ್ವ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಕಳವು ಮಾಡಿದ ಸೊತ್ತನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಮಂಗಳೂರಿನ ಅಡ್ಯಾರು ಗ್ರಾಮದ ಪದವು, ಅಡ್ಯಾರ್, ಭರಿರತ್ ಮಂಜಿಲ್ ನಿವಾಸಿ ಅಬ್ದುಲ್ ಅಕ್ರಮ್(33) ಎಂದು ಗುರುತಿಸಲಾಗಿದೆ.

ಆರೋಪಿಯು ಡಿ. 8ರ ರಾತ್ರಿ ಕಂಕನಾಡಿ ಮಾರ್ಕೆಟ್ ಬಳಿ ಪಾರ್ಕ್ ಮಾಡಿದ್ದ ಕ್ರೇಟಾ ಕಾರಿನ ಗ್ಲಾಸ್ ಒಡೆದು ಕಾರಿನ ಒಳಗಡೆ ಇದ್ದ 6,80,000 ರೂ. ಮೌಲ್ಯದ ಚಿನ್ನಾಭರಣ ಮತ್ತು ಲ್ಯಾಪ್ ಟಾಪ್ ಇರುವ ವ್ಯಾನಿಟ್ ಬ್ಯಾಗ್ ಅನ್ನು ಕಳ್ಳತನ ಮಾಡಿದ್ದಾನೆ. ಬಳಿಕ ದೂರುದಾರರು ಬಂದು ನೋಡಿದಾಗ ಘಟನೆಯು ಬೆಳಕಿಗೆ ಬಂದಿದ್ದು, ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅವರ ದೂರಿನ ಮೇರೆಗೆ ಕಲಂ 303(2) ಬಿಎನ್ ಎಸ್ ಕಾಯಿದೆಯಂತೆ ಪ್ರಕರಣ ದಾಖಲಾಗಿ ತನಿಖೆ ನಡೆಸಲಾಗುತ್ತದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನು 24 ಗಂಟೆಯೊಳಗಾಗಿ ಬಂಧಿಸುವಲ್ಲಿ ಯಶಸ್ವಿಯಾಗುತ್ತಾರೆ. ಆರೋಪಿಯಿಂದ ಕಳವು ಮಾಡಿದ ಚಿನ್ನಾಭರಣ ಮತ್ತು ಲ್ಯಾಪ್ ಟಾಪ್ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಆಕ್ಸೆಸ್ ಸ್ಕೂಟರ್ ಸೇರಿದಂತೆ ಒಟ್ಟು 7,30,000ರೂ. ಮೌಲ್ಯದ ಬೆಲೆ ಬಾಳುವ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ ವಾಲ್ ಅವರ ಮಾರ್ಗದರ್ಶನದಂತೆ ಸಿದ್ದಾರ್ಥ ಗೋಯಲ್ (ಕಾ&ಸು) ಮತ್ತು ಕೆ.ರವಿಶಂಕರ್ ಡಿಸಿಪಿ ಕ್ರೈಂ ಅವರ ನಿರ್ದೇಶನದಂತೆ ಹಾಗೂ ಮಂಗಳೂರು ಕೇಂದ್ರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಪ್ರತಾಪ್ ಸಿಂಗ್ ಥೋರಾಟ್ ಅವರ ನೇತೃತ್ವದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಸೋಮಶೇಖರ್ ಜೆ.ಸಿ, ಪಿಎಸ್‌ಐ ಉಮೇಶ್ ಕುಮಾರ್ ಎಂ.ಎನ್ ಮತ್ತು ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ವರ್ಗ ಈ ಕಾರ್ಯಚರಣೆಯಲ್ಲಿ ಭಾಗವಹಿಸಿರುತ್ತಾರೆ.

- Advertisement -

Related news

error: Content is protected !!