Tuesday, May 7, 2024
spot_imgspot_img
spot_imgspot_img

ಮಂಗಳೂರು: ಶಾಲಾ ಬಸ್ ಗೆ ಡಿಕ್ಕಿ ಹೊಡೆದ ಟಿಪ್ಪರ್ ; ಮಕ್ಕಳು ಸೇರಿ ನಾಲ್ವರಿಗೆ ಗಂಭೀರ ಗಾಯ

- Advertisement -G L Acharya panikkar
- Advertisement -
vtv vitla

ಬಜಪೆ: ಶಾಲಾ ಬಸ್ ಗೆ ಟಿಪ್ಪರ್ ಡಿಕ್ಕಿಯಾದ ಘಟನೆ ಗುರುಪುರದ ಅಣೆ ಬಳಿ ನಿನ್ನೆ ಸಂಜೆ ನಡೆದಿದೆ. ಘಟನೆಯಲ್ಲಿ ಬಸ್‌ನ ನಿರ್ವಾಹಕ ಹಾಗೂ ಇತರ ಮೂವರು ಮಕ್ಕಳಿಗೆ ಗಾಯಗಳಾಗಿದೆ.

ಎರಡು ವಾಹನಗಳು ಮಂಗಳೂರಿನಲ್ಲಿ ಸಾಗುತ್ತಿತ್ತು. ವೇಗವಾಗಿದ್ದ ಟಿಪ್ಪರ್, ಶಾಲಾ ಬಸ್‌ಗೆ ಡಿಕ್ಕಿ ಹೊಡೆದಿದ್ದು, ಟಿಪ್ಪ‌ರ್‍ ಎದುರು ಭಾಗವು ನಜ್ಜುಗುಜ್ಜಾಗಿದೆ. ನಿರ್ವಾಹಕ ಮೋನು ಬಸ್‌ನ ಪುಟ್‌ಬೋಡ್‌ರ್ನಿಂದ ಕೆಳಗಡೆ ಬಿದ್ದು ಗಾಯಗೊಂಡಿದ್ದಾರೆ. ಮೋನು ಅವರ ಕಾಲು ಮತ್ತು ತಲೆಗೆ ಗಂಭೀರ ಗಾಯವಾಗಿದೆ. ಡಿಕ್ಕಿಯಾದ ರಭಸಕ್ಕೆ ಬಸ್‌ನೊಳಗಿದ್ದು ಮೂವರು ಮಕ್ಕಳಿಗೆ ಗಾಯವಾಗಿದೆ.

ಗಾಯಾಳು ನಾಲ್ವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ, ಶಾಲಾ ಬಸ್‌ನ ನಿರ್ವಾಹಕಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!