Sunday, April 28, 2024
spot_imgspot_img
spot_imgspot_img

ಮಂಗಳೂರು: ಡೆಂಗ್ಯೂ ಜ್ವರಕ್ಕೆ ವಿದ್ಯಾರ್ಥಿ ಬಲಿ; ಅಂಗಾಂಗ ದಾನ

- Advertisement -G L Acharya panikkar
- Advertisement -

ಮಂಗಳೂರು: 8ನೇ ತರಗತಿಯ ವಿದ್ಯಾರ್ಥಿಯೋರ್ವ ಡೆಂಗ್ಯೂ ಜ್ವರಕ್ಕೆ ಬಲಿಯಾದ ಘಟನೆ ನಡೆದಿದೆ. ನಗರದ ಅತ್ತಾವರ ಏಳನೇ ಕ್ರಾಸ್ ರಸ್ತೆಯ ನಿವಾಸಿಯಾಗಿರುವ ಸೋನಿ ಮತ್ತು ಆಲ್ಫೋನ್ಸ್ ಅವರ ಪುತ್ರ ಆಶೀಶ್ ಡಿಸೋಜಾ(13) ಡೆಂಗ್ಯೂ ಗೆ ಬಲಿಯಾದ ವಿದ್ಯಾರ್ಥಿ.

ತೀವ್ರ ಜ್ವರದಿಂದ ಬಳಲುತ್ತಿದ್ದ ಆಲ್ಫೋನ್ಸ್ ರ ಇಬ್ಬರು ಪುತ್ರರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಪೈಕಿ 13ರ ಹರೆಯದ ಆಶೀಶ್ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾನೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಶಿಶ್ ನ ಅಣ್ಣನನ್ನು ಡಿಸ್ಚಾರ್ಜ್ ಮಾಡಲಾಗಿದೆ. ಆಶೀಶ್ ಅಂಗಾಂಗ ಮತ್ತು ದೇಹದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಸದಾ ಚುರುಕುತನದಿಂದಿದ್ದ ಆಶಿಶ್ ಇಗರ್ಜಿಯ ಬಲಿಪೀಠ ಸೇವಾ ಸಂಘದ ಸಕ್ರೀಯ ಸದಸ್ಯನಾಗಿದ್ದ ಎನ್ನಲಾಗಿದೆ.

- Advertisement -

Related news

error: Content is protected !!