- Advertisement -
- Advertisement -
ಮಂಗಳೂರು : ಮುಂಜಾಗೃತಾ ಕ್ರಮ ಮತ್ತು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು 83 ರೌಡಿ ಶೀಟರ್ಗಳ ಮನೆಗೆ ದಾಳಿ ನಡೆಸಿದ್ದಾರೆ.
ಅಕ್ರಮ ಆಯುಧಗಳ ಬಗ್ಗೆ ಶೋಧ ನಡೆಸಿ ಯಾವುದೇ ರೌಡಿ ಚಟುವಟಿಕೆ ನಡೆಸದಂತೆ ಎಚ್ಚರಿಕೆ ನೀಡಲಾಗಿದೆ. ತಪಾಸಣೆ ವೇಳೆ ಯಾವುದೇ ಆಯುಧಗಳು ಪತ್ತೆಯಾಗಿಲ್ಲ. ಪೊಲೀಸ್ ಇಲಾಖೆ ಆಗಾಗ್ಗೆ ಇಂತಹ ತಪಾಸಣೆ ಕಾರ್ಯಾಚರಣೆಯನ್ನು ನಡೆಸುತ್ತಿದ್ದು ಇದರಿಂದಾಗಿ ರೌಡಿಗಳ ಮೇಲೆ ನಿರಂತರ ನಿಗಾ ಸಾಧ್ಯವಾಗುತ್ತದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲೂ ರೌಡಿ ಶೀಟರ್, ಹಳೆ ಆರೋಪಿಗಳನ್ನು ತಪಾಸಣೆಗೊಳಪಡಿಸಲಾಗಿದೆ. ಮಂಗಳೂರು ಕಮಿಷನರೇಟ್ ವ್ಯಾ ಪ್ತಿಯಲ್ಲೂ ರೌಡಿ ಶೀಟರ್, ಹಳೆ ಆರೋಪಿಗಳನ್ನು ತಪಾಸಣೆಗೊಳಪಡಿಸಲಾಗಿದೆ.
- Advertisement -