Sunday, May 5, 2024
spot_imgspot_img
spot_imgspot_img

ಮಂಗಳೂರು: ನೀರಿನಲ್ಲಿ ಆಟವಾಡುತಿದ್ದ ಬಾಲಕ ಸಮುದ್ರ ಪಾಲು..!

- Advertisement -G L Acharya panikkar
- Advertisement -

ಮಂಗಳೂರು: ವಿದ್ಯಾರ್ಥಿಯೋರ್ವ ನೀರಿನಲ್ಲಿ ಆಟವಾಡುವುದಕ್ಕೆ ಬೀಚ್‌ಗೆ ತೆರಳಿದ್ದ ವೇಳೆ ಸಮುದ್ರಪಾಲಾದ ಘಟನೆ ಮಂಗಳೂರಿನ ಪಣಂಬೂರು ಬೀಚ್‌ನಲ್ಲಿ ನಡೆದಿದೆ.

ಸಮುದ್ರ ಪಾಲಾದ ಬಾಲಕ ಬೈಕಂಪಾಡಿಯ ಮೀನಕಳಿಯ ಸರ್ಕಾರಿ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದ ತುಕರಾಮ (13) ಎಂದು ಗುರುತಿಸಲಾಗಿದೆ.

ಶಾಲೆ ಬಿಟ್ಟ ಬಳಿಕ ತನ್ನ ಸ್ನೇಹಿತನೊಂದಿಗೆ ಪಣಂಬೂರು ಬೀಚ್ ಗೆ ಬಂದಿದ್ದ. ನೀರಾಟವಾಡುತ್ತಿದ್ದಾಗ ಬೃಹತ್ ಅಲೆಗೆ ಕೊಚ್ಚಿಹೋಗಿ ಮುಳುಗಿ ನಾಪತ್ತೆಯಾಗಿದ್ದಾನೆ. ಬೀಚ್ ನಲ್ಲಿ ವಿದ್ಯಾರ್ಥಿ ಮುಳುಗುತ್ತಿರುವುದನ್ನು ಕಂಡ ಇತರರು ರಕ್ಷಣಾ ದಳಕ್ಕೆ ತಿಳಿಸಿದ್ದಾರೆ. ತಕ್ಷಣ ಜೆಟ್ ಸ್ಕೀ ಮೂಲಕ ಕಾಪಾಡಲು ಯತ್ನಿಸಿದರೂ ಸಾಧ್ಯವಾಗಲಿಲ್ಲ .

ಬಾಲಕ ಉತ್ತರ ಕರ್ನಾಟಕದ ಮೂಲದವರಾಗಿದ್ದು, ಕೆಲ್ಸದ ನಿಮಿತ್ತ ಈತನ ಪೋಷಕರು ಬೈಕಂಪಾಡಿ ಬಳಿಯ ಮೀನಕಳಿಯ ಬಳಿ ವಾಸವಿದ್ದಾರೆ. ಘಟನೆ ಕುರಿತು ಪಣಂಬೂರು ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!