- Advertisement -
- Advertisement -








ಮಂಗಳೂರು: ಹೃದಯಾಘಾತದಿಂದ ಆಟೋ ಚಾಲಕ ಮೃತಪಟ್ಟ ಘಟನೆ ಮಂಗಳೂರು ನಗರದ ಸೆಂಟ್ರಲ್ ರೈಲ್ವೇ ನಿಲ್ದಾಣದ ರಿಕ್ಷಾ ಪಾರ್ಕ್ ಕ್ಯೂನಲ್ಲಿದ್ದಾಗಲೇ ಈ ಘಟನೆ ನಡೆದಿದೆ.
ಮೃತಪಟ್ಟ ಆಟೋ ಚಾಲಕ ಬಜಾಲ್ ವಿದ್ಯಾ ನಗರದ ನಿವಾಸಿ ಇಕ್ಬಾಲ್ (47) ಎಂದು ಗುರುತಿಸಲಾಗಿದೆ.
ರಿಕ್ಷಾ ಪಾರ್ಕ್ನಲ್ಲಿ ಕ್ಯೂ ನಲ್ಲಿರುವಾಗಲೇ ಇಕ್ಬಾಲ್ ರವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣವೇ ಇತರ ರಿಕ್ಷಾ ಚಾಲಕರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಮೂರು ಮಕ್ಕಳು, ಬಂಧುಮಿತ್ರರನ್ನು ಅಗಲಿದ್ದಾರೆ.
- Advertisement -