- Advertisement -
- Advertisement -



ಮಂಗಳೂರು: ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಗುರುವಾರ ಸಂಜೆ ಮನೆಯ ಪಕ್ಕದ ಹೊಂಡದಲ್ಲಿ ಶವವಾಗಿ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ನ ಮೆನ್ನಬೆಟ್ಟು ಗ್ರಾಮದ ಮಾರಡ್ಕ ನಿವಾಸಿ ರವಿ (34) ಎಂದು ಗುರುತಿಸಲಾಗಿದೆ.
ರವಿರವರ ಮೃತಪಟ್ಟ ಕೆಲವು ದಿನಗಳಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ನಾಪತ್ತೆಯಾಗಿದ್ದ ರವಿಯವರು ಕೂಲಿ ಕೆಲಸವನ್ನು ಮಾಡಿಕೊಂಡಿದ್ದರು. ನ. 2 ರ ಬೆಳಿಗ್ಗೆ 10 ಗಂಟೆಗೆ ಮನೆಯಿಂದ ಪೇಟೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುವ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ರವಿ ಅವರ ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಬಂದಿದ್ದು, ನ. 6 ರಂದು ಮನೆಯವರು ಮನೆಯ ಮಾಲೀಕರಿಗೆ ತಿಳಿಸಿ ಬಳಿಕ ಅವರು ನೆರೆಹೊರೆಯವರಲ್ಲಿ, ಸಂಬಂಧಿಕರಲ್ಲಿ ವಿಚಾರಿಸಿದ್ದಾರೆ. ಬಳಿಕ ಸಂಬಂಧಿಕರ ಮನೆಗೂ ಹೋಗದೇ ಕಾಣೆಯಾಗಿರುವ ಬಗ್ಗೆ ರವಿಯವರ ಪತ್ನಿ ಶ್ವೇತಾರವರು ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
- Advertisement -