ಮಂಗಳೂರು: ನಗರದ ಬೈಕಂಪಾಡಿ ಸಮೀಪ ಲೈಂಗಿಕ ಅಲ್ಪಸಂಖ್ಯಾತರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಓರ್ವನನ್ನು ಬಂಧಿಸಲಾಗಿದೆ. ಸ್ಥಳೀಯ ನಿವಾಸಿ ನಿಖಿಲ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.
ಪ್ರಕರಣ ವಿವರ: ಜುಲೈ 26ರಂದು ರಾತ್ರಿ ನಿಖಿಲ್ ತನ್ನ ಇತರ ಸಂಗಡಿಗರಾದ ಅರುಂಧತಿ, ರಾಶಿ, ರೇಖಾ, ಪ್ರೀಯಾ ಮತ್ತಿತರು ಸೇರಿ ಶಾಂತಾ ಪೂರ್ಣಿಮಾ, ನೀಲಾ, ಹುಲಿಗೆಮ್ಮ ಮತ್ತು ಪಾರ್ವತಿ ಎಂಬವರ ಮೇಲೆ ಬೈಕಂಪಾಡಿ ರೈಲ್ವೆ ಗೇಟ್ ಬಳಿ ಭಿಕ್ಷಾಟನೆ ಮಾಡುತ್ತಿದ್ದ ವೇಳೆ ಹಲ್ಲೆ ನಡೆಸಿದ್ದರು.
ಇದನ್ನೂ ಓದಿ: ಲಕ್ಷಾಂತರ ಮೌಲ್ಯದ ರಕ್ತ ಚಂದನ ಕಳವು ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಪೊಲೀಸರ ವಶ
ಈ ವೇಳೆ ಇಲ್ಲಿ ಬೇರೆ ಜಿಲ್ಲೆಯಿಂದ ಬಂದು ಭಿಕ್ಷಾಟನೆ ಮಾಡಬಾರದು ಎಂದು ಆರೋಪಿಗಳು ಬೆದರಿಕೆ ಹಾಕಿದ್ದರು. ಆರೋಪಿಗಳು ಮೆಣಸಿನ ಪುಡಿ ಎರಚಿ, ಬಾಟಲಿಗಳು ಮತ್ತು ಇತರ ಹರಿತ ಆಯುಧಗಳಿಂದ ಹಲ್ಲೆ ನಡೆಸಿದ್ದರು.
ಇದನ್ನೂ ಓದಿ: ಪುತ್ತೂರು: ಮಹಿಳೆ ಮೇಲೆ ಹಲ್ಲೆ ಆರೋಪ; ನಿವೃತ್ತ ಸೇನಾ ಸಿಬ್ಬಂದಿಯ ಬಂಧನ
ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿದ ಪಣಂಬೂರು ಪೊಲೀಸರು ಆರೋಪಿಯೊಬ್ಬನನ್ನು ಉಡುಪಿಯಲ್ಲಿ ಬಂಧಿಸಿದ್ದಾರೆ. ಉಳಿದವರಿಗೆ ಹುಡುಕಾಟ ಮುಂದುವರಿದಿದೆ.