Sunday, June 29, 2025
spot_imgspot_img
spot_imgspot_img

ತಪಸ್ಯ ಫೌಂಡೇಶನ್ ವತಿಯಿಂದ ಮಂಗಳೂರು ಟ್ರಯಾಥ್ಲಾನ್‌ ಮತ್ತು ಮಂಗಳೂರು ಬೀಚ್‌ ಫೆಸ್ಟಿವಲ್‌-2025 ಲಾಂಚ್ ಕಾರ್ಯಕ್ರಮ

- Advertisement -
- Advertisement -

ಮಂಗಳೂರು: “ತಪಸ್ಯ ಫೌಂಡೇಶನ್” ವತಿಯಿಂದ ನಡೆಯಲಿರುವ ಮಂಗಳೂರು ‌ ಟ್ರಯಾಥ್ಲಾನ್ ಬೀಚ್‌ ಫೆಸ್ಟಿವಲ್‌ -2025 ಲಾಂಚ್ ಕಾರ್ಯಕ್ರಮ ನಗರದ ಟಿಎಂಎ ಪೈ ಸ್ಟಾರ್‌ ಕಾನ್ಫರೆನ್ಸ್ ಹಾಲ್‌ನಲ್ಲಿ ಜರುಗಿತು. ದೀಪ ಬೆಳಗಿಸುವ ಮೂಲಕ ಅತಿಥಿಗಳು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ, “ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ಮಂಗಳೂರು ಟ್ರಯಾಥ್ಲಾನ್ ಹಾಗೂ ಮಂಗಳೂರು ಬೀಚ್ ಫೆಸ್ಟಿವಲ್ ಕಾರ್ಯಕ್ರಮ ಆಯೋಜನೆಯಾಗಿದೆ. ಮಕ್ಕಳಲ್ಲಿ ಕ್ಯಾನ್ಸರ್ ರೋಗದ ಕುರಿತು ಜಾಗೃತಿ ಮೂಡಿಸುತ್ತಿರುವ ತಪಸ್ಯ ಫೌಂಡೇಶನ್ ಸಾರ್ಥಕ ಕೆಲಸವನ್ನು ಮಾಡುತ್ತಿದೆ. ಸಂಘಟನೆ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಮಂಗಳೂರನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡುತ್ತದೆ ಎನ್ನುವುದರಲ್ಲಿ ಸಂಶಯವಿಲ್ಲ. ಕ್ಯಾನ್ಸರ್ ಪೀಡಿತ ಮಕ್ಕಳ ಆರೈಕೆಗೆ 100 ಕೋಟಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಿಸುತ್ತಿರುವ ಸಂಘಟನೆಯ ಜೊತೆಗೆ ಮಹಾನಗರ ಪಾಲಿಕೆ ನಿರಂತರ ಸಹಕಾರ ನೀಡಲಿದೆ” ಎಂದರು.

ವೇದಿಕೆಯಲ್ಲಿ ಮಂಗಳೂರು ಸಂಸದ ಬೃಜೇಶ್ ಚೌಟ, ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷ, ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿ ಬಿ. ಗುಣರಂಜನ್ ಶೆಟ್ಟಿ, ಐಡಿಎಫ್‌ಸಿ ಬ್ಯಾಂಕಿನ ರೀಜನಲ್ ಹೆಡ್ ಶರಣ್ ರಜನಿ, ಎನ್ ಐಟಿಕೆ ಡೀನ್ ಎ.ಸಿ. ಹೆಗ್ಡೆ, ಯೇನಪೋಯ ವಿವಿಯ ವೈಸ್‌ ಚಾನ್ಸೆಲರ್‌ ಡಾ। ವಿಜಯ ಕುಮಾರ್, ಇಂಡಿಯನ್ ಟ್ರಯಾಥ್ಲಾನ್ ಫೆಡರೇಷನ್ ಅಭಿವೃದ್ಧಿ ಅಧಿಕಾರಿ ಹರೀಶ್ ಪ್ರಸಾದ್, ಶರಣ್ ರಜನಿ, ಸಂದೇಶ್ ಹೆಗ್ಡೆ, ನರಸಿಂಹ ಹೆಗ್ಡೆ, ಕೆಎಂಸಿ ಆಸ್ಪತ್ರೆಯ ಹರ್ಷ ಪ್ರಸಾದ್‌ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಶುಭಹಾರೈಸಿದರು.

52ನೇ ವಯಸ್ಸಿನಲ್ಲಿ ಮೌಂಟ್ ಏವರೆಸ್ಟ್ ಶಿಖರ ಏರಿರುವ ಕರ್ನಾಟಕದ ಮೊದಲ ಮಹಿಳೆ ಡಾ. ಉಷಾ ಹೆಗ್ಡೆ ಅವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಟಿ ಶರ್ಟ್, ಮೆಡಲ್, ಬ್ಯಾಡ್ಜ್ ಅನಾವರಣಗೊಳಿಸಿದರು. ತಪಸ್ಯ ಫೌಂಡೇಶನ್ ಮೆನೇಜಿಂಗ್ ಟ್ರಸ್ಟಿ ಸಬಿತಾ ಶೆಟ್ಟಿ ಸ್ವಾಗತಿಸಿ, ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

- Advertisement -

Related news

error: Content is protected !!