Saturday, June 28, 2025
spot_imgspot_img
spot_imgspot_img

ಮಂಗಳೂರು: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ಕೇರಳದಲ್ಲಿ ನಿಧನ..!

- Advertisement -
- Advertisement -

ಮಂಗಳೂರು: ಇಟ್ಟಿಕುಳಂ ನಿವಾಸಿಯಾಗಿರುವ ಹಾಗೂ ಉಳ್ಳಾ ಖಾಝೀಯ ಬಹುಃ ಸೈಯ್‌ಉದ್‌ ಫಝಲ್‌ ಕೋಯಮ್ಮ ತಂಙಳ್‌ ( ಕೂರ ತಂಙಳ್‌) ರವರು ಕೇರಳದಲ್ಲಿ ಸೋಮವಾರ( ಜು. 08 )ನಿಧನರಾಗಿದ್ದಾರೆ.

ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಹೃದಯ ಸ್ತಂಭನದಿಂದ ತಂಜಳ್ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.

ಇಂದು ಅಪರಾಹ್ನ ಉಳ್ಳಾಲ ಸೈಯದ್ ಮದನಿ ದರ್ಗಾ ವಠಾರದಲ್ಲಿ ನಿಗದಿಯಾಗಿದ್ದ ಸೈಯದ್ ಮದನಿ ಶರೀಅತ್ ಕಾಲೇಜು ವಿದ್ಯಾರ್ಥಿಗಳ ನೂತನ ಹಾಸ್ಟೆಲ್ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಬೆಳಗ್ಗೆ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಸಿದ್ಧರಾಗುತ್ತಿದ್ದರು. ಈ ವೇಳೆ ಹೃದಯ ಸ್ತಂಭನ ಆಗಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಅಪರಾಹ್ನ 2 ಗಂಟೆಯ ವರೆಗೆ ಎಟ್ಟುಕ್ಕುಳಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

- Advertisement -

Related news

error: Content is protected !!