- Advertisement -
- Advertisement -
ಮಂಗಳೂರು: ನಾಳೆಯಿಂದ ಮಂಗಳೂರಿನಲ್ಲಿ ಎಲ್ಲಾ ಅಂಗಡಿ-ಶಾಪ್ ತೆರೆಯಲು ಅನುಮತಿ ನೀಡಿದೆ.
ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ನಾಳೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಎಲ್ಲಾ ಅಂಗಡಿ ತೆರೆಯಲು ಅನುಮತಿ ಸಿಕ್ಕಿದೆ.
ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಬೆಳಗ್ಗೆ7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಎಲ್ಲಾ ರೀತಿಯ ಅಂಗಡಿ ತೆರೆಯಬಹುದಾಗಿದೆ. ಆದರೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಈ ಬಗ್ಗೆ ಇಂದು ಅಧಿಕೃತ ಆದೇಶ ಹೊರಡಿಸಲಿದ್ದಾರೆ. ಸಂಸದ ನಳಿನ್ ಮತ್ತು ಎಲ್ಲಾ ಶಾಸಕರ ಮನವಿ ಹಿನ್ನೆಲೆಯಲ್ಲಿ ಈ ಕ್ರಮ ಜಾರಿಗೊಳಿಸಲಾಗಿದೆ.
- Advertisement -