- Advertisement -
- Advertisement -
ಮಂಗಳೂರು: ಭಾರತದ ಜನರಿಗೆ ಕೋವಿಡ್ ಲಸಿಕೆಯ ಕೊರತೆಯಿರುವಾಗ ಪಾಕಿಸ್ತಾನಕ್ಕೆ ಲಸಿಕೆ ಪೂರೈಕೆ ಮಾಡಲು ಕೇಂದ್ರ ಸರಕಾರ ಹೆಚ್ಚು ಆಸಕ್ತಿ ವಹಿಸಲು ಕಾರಣವೇನು ಎಂದು ಶಾಸಕ ಯು.ಟಿ.ಖಾದರ್ ಪ್ರಶ್ನಿಸಿದ್ದಾರೆ.

ಮಂಗಳೂರು ನಗರದಲ್ಲಿರುವ ಕಾಂಗ್ರೆಸ್ ಕಚೇರಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ರೀಸರ್ಚ್ ಡಿಪಾರ್ಟ್ಮೆಂಟ್ನ ಲೆಟರ್ ಹೆಡ್ನ ನಕಲಿ ಪತ್ರವನ್ನು ತಯಾರಿಸಿ ಕೋಮು ಸಾಮರಸ್ಯ ಕದಡುವ ಸಂದೇಶಗಳನ್ನು ಟೂಲ್ ಕಿಟ್ ಆ್ಯಪ್ ಸೇರಿದಂತೆ ಜಾಲತಾಣಗಳಲ್ಲಿ ಹರಡುತ್ತಿರುವ ಬಗ್ಗೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಚಿವೆ ಸ್ಮತಿ ಇರಾನಿ, ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿದಂತೆ ಇತರ ಹಲವರ ವಿರುದ್ಧ ದಿಲ್ಲಿ ಪೊಲೀಸ್ ಆಯುಕ್ತರಿಗೆ ದೂರು ನೀಡಿ ಎಫ್ಐಆರ್ ದಾಖಲಿಸಲಾಗಿದೆ ಎಂದಿದ್ದಾರೆ.



- Advertisement -