- Advertisement -
- Advertisement -




ವಿಧಾನಪರಿಷತ್ನ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1693 ಮತಗಳ ಅಂತರದೊಂದಿಗೆ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆಗೆ ಕ್ಷಣಗಣನೆ ಆರಂಭವಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ ಸದಸ್ಯರನ್ನು ಆಯ್ಕೆಗೆ ಅಕ್ಟೋಬರ್ 21ರಂದು ಮತದಾನ ನಡೆದಿತ್ತು. ಇದೀಗ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ಮತ ಎಣಿಕೆಯ ಹಂತ ಪೂರ್ಣ ಗೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ, ಎಸ್ಡಿಪಿಐ ಅಭ್ಯರ್ಥಿ ಅನ್ವರ್ ಸಾದತ್ ಬಜತ್ತೂರು, ಪಕ್ಷೇತರ ಅಭ್ಯರ್ಥಿ ದಿನಕರ್ ರವರ ವಿರುದ್ಧ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಸಾಧಿಸಿದ್ದಾರೆ.
- Advertisement -