ಮಂಗಳೂರು: ಮಂಗಳೂರು ನಗರದ ಕಟ್ಟಡಗಳ ಗೋಡೆಗಳಲ್ಲಿ ಉಗ್ರ ಬರಹ ಬರೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಮಾಹಿತಿ ಲಭ್ಯವಿದ್ದಲ್ಲಿ ಪೊಲೀಸ್ ಇಲಾಖೆಗೆ ತಿಳಿಸುವಂತೆ ನಗರ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ವಿನಂತಿಸಿದ್ದಾರೆ.
ಈ ಬಗ್ಗೆ ಈಗಾಗಲೇ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿರುತ್ತದೆ. ಇಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಯಾವುದೇ ವ್ಯಕ್ತಿ ಅಥವಾ ಸಂಘಟನೆಗಳ ವಿರುದ್ದ ನಿರ್ಧಾಕ್ಷಿಣವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಬಗ್ಗೆ ಮಾಹಿತಿ ಲಭ್ಯವಿದ್ದಲ್ಲಿ ಸಾರ್ವಜನಿಕರು ಉಪಪೊಲೀಸ್ ಆಯುಕ್ತರು ಕಾನೂನು ಮತ್ತು ಸುವ್ಯವಸ್ಥೆ ವಿಭಾಗ ( ಮೊಬೈಲ್ ನಂಬರ್ 9480802304), ಉಪ ಪೊಲೀಸ್ ಆಯುಕ್ತರು ಅಪರಾಧ ಮತ್ತು ಸಂಚಾರ ವಿಭಾಗ (ಮೊಬೈಲ್ ನಂಬರ್ 9480802305), ನಗರ ನಿಯಂತ್ರಣ ಕೊಠಡಿ ( 08242220800) ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಹಾಗೂ ಮಾಹಿತಿ ನೀಡಿದ ವ್ಯಕ್ತಿಯ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಇಂತಹ ಅಪರಾಧಗಳನ್ನು ತಡೆಗಟ್ಟುವುದು ಅತೀ ಅವಶ್ಯಕ ಎಂದು ಅವರು ಹೇಳಿದರು.