Friday, May 17, 2024
spot_imgspot_img
spot_imgspot_img

ಮಂಗಳೂರು: ಯುವಕನಿಗೆ ಚೂರಿ ಇರಿತ ಪ್ರಕರಣ; ಮೂವರ ಬಂಧನ

- Advertisement -G L Acharya panikkar
- Advertisement -
vtv vitla

ಮಂಗಳೂರು: ಯುವಕನಿಗೆ ಚೂರಿ ಇರಿದ ಘಟನೆ ಮಂಗಳೂರು ಹೊರವಲಯದ ಕಳವಾರು ಎಂಬಲ್ಲಿ ನಡೆದಿದೆ. ಅಬ್ದುಲ್ ಸಫ್ವಾನ್‌ (23) ಚೂರಿ ಇರಿತಕ್ಕೊಳಗಾದವರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಳವಾರಿನ ಪ್ರಶಾಂತ್ @ ಪಚ್ಚು (28), ಧನರಾಜ್ (23),ಯಜ್ಞೇಶ್ (22) ಎಂದು ಗುರುತಿಸಲಾಗಿದೆ.

ಅಬ್ದುಲ್ ಸಫ್ವಾನ್ ಎಂಬಾತನಿಗೆ ಆಗಸ್ಟ್ 31ರಂದು ಗಂಟೆ ರಿಯಾಝ್ ಎಂಬಾತ ಕಳವಾರು ಪ್ರದೇಶದಲ್ಲಿ ಗಲಾಟೆ ಮಾಡಿದ್ದ. ಈ ಗಲಾಟೆಯಲ್ಲಿ ಅಬ್ದುಲ್ ಸಫ್ವಾನ್‌ ಪಾತ್ರವೂ ಇದೆ ಎಂಬ ಶಂಕೆಯಲ್ಲಿ ಆರೋಪಿಗಳು ದಾಳಿ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಮಾತನಾಡಲಿದೆ ಎಂದು ಆರೋಪಿಗಳು ಅಬ್ದುಲ್ ಸಲ್ಮಾನ್ ನನ್ನು ಕರೆದಿದ್ದರು. ಈ ವೇಳೆ ಸಲ್ಮಾನ್ ತನ್ನ ಸ್ನೇಹಿತ ಮುಹಮ್ಮದ್‌ ಸಲ್ಮಾನ್ ನೊಂದಿಗೆ ತೆರಳುತ್ತಿದ್ದಾಗ ಆರೋಪಿಗಳು ಕಳವಾರು ಗೆಳೆಯರ ಬಳಗ ಬಸ್ಸು ನಿಲ್ದಾಣದ ಬಳಿ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಡ್ರಾಗರ್ ಮತ್ತು ಚೂರಿಯಿಂದ ಹಲ್ಲೆ ನಡೆಸಿದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಯಿಂದ ಅಬ್ದುಲ್ ಸಫ್ವಾನ್‌ನ ಬಲ ಕಂಕುಳ, ಕಣ್ಣು, ಬೆನ್ನು ಮತ್ತು ಬಲಗೆ ತೋಳಿಗೆ ಚೂರಿಯಿಂದ ಇರಿದ ಗಾಯಗಳಾಗಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ.

ಆರೋಪಿಗಳ ಪೈಕಿ ಪ್ರಮುಖರಾದ ಪ್ರಶಾಂತ್ ಯಾನೆ ಪಚ್ಚು, ಧನರಾಜ್ ಮತ್ತು ಯಜೇಶ್‌ನನ್ನು ಬಂಧಿಸಿರುವ ಪೊಲೀಸರು, ಪುನೀತ್, ಬಬ್ಬು ಗಣೇಶ್‌, ಪ್ರದೀಪ್ ಮತ್ತು ಇತರರಿಗಾಗಿ ಸುರತ್ಕಲ್‌ ಪೊಲೀಸರು ಬಲೆ ಬೀಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!