Sunday, June 21, 2026
spot_imgspot_img
spot_imgspot_img

ಮಂಗಳೂರು: ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ವ್ಯಕ್ತಿ ಲಕ್ಷಾಂತರ ರೂ. ವಂಚನೆ..!

- Advertisement -
- Advertisement -

ಮಂಗಳೂರು: ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಕರೆ ಮಾಡಿ ವ್ಯಕ್ತಿಯೊಬ್ಬರಿಂದ 50 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ನಡೆದಿದೆ.

ಅ.11ರಂದು ಕರೆ ಮಾಡಿದ ಅಪರಿಚಿತ ವ್ಯಕ್ತಿ ತನ್ನನ್ನು ಮಹಾರಾಷ್ಟ್ರದ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟ‌ರ್ ವಿನಯ ಕುಮಾರ ಎಂದು ಪರಿಚಯಿಸಿಕೊಂಡಿದ್ದ ಕಿರುಕುಳದ ಬಗ್ಗೆ ನಿಮ್ಮ ಮೇಲೆ ದೂರು ದಾಖಲಾಗಿದೆ. ಠಾಣೆಗೆ ಬರಬೇಕು ಎಂದು ತಿಳಿಸಿದ. ಬಳಿಕ ಆಕಾಶ ಕುಲ್ಲಹಾರಿ ಎಂದು ಪರಿಚಯಿಸಿಕೊಂಡ ವ್ಯಕ್ತಿ ತಾನು ಸಿಬಿಐನಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ. ನರೇಶ್ ಗೋಯೆಲ್ ಎಂಬವರ ಮನೆಯನ್ನು ಜಪ್ತಿ ಮಾಡುವಾಗ ನಿಮ್ಮ ಎಟಿಎಂ ಕಾರ್ಡ್ ಸಿಕ್ಕಿದೆ. ಅದರಲ್ಲಿ 20 ಜನರು 2 ಕೋ.ರೂ.ಗಳನ್ನು ನಿಮ್ಮಮುಂಬೈಯ ಖಾತೆಯಲ್ಲಿ ಹೂಡಿಕೆ ಮಾಡಿದ್ದಾರೆ. ಆ ಬಗ್ಗೆ ಮನಿ ಲಾಂಡರಿಂಗ್ ಪ್ರಕರಣ ನಿಮ್ಮ ಮೇಲೆ ದಾಖಲಾಗಿದೆ. ಹಾಗಾಗಿ ನಿಮ್ಮನ್ನು ಬಂಧಿಸಲಾಗುವುದು ಎಂದು ತಿಳಿಸಿದ.

ನಿಮ್ಮ ದಾಖಲಾತಿಗಳನ್ನು ಸುಪ್ರೀಕೋರ್ಟ್‌ಗೆ ಸಲ್ಲಿಸಬೇಕು. ನಿಮಗೆ ಬರಲು ಅಸಾಧ್ಯವಾದರೆ ನಾನೇ ಆನ್‌ಲೈನ್ ಮೂಲಕ ತನಿಖೆ ಮಾಡುತ್ತೇನೆ ಎಂದಿದ್ದು, ಮರುದಿನ ಮತ್ತೆ ಕರೆ ಮಾಡಿದ ಆಕಾಶ ಕುಲ್ಲಹಾರಿ ಬ್ಯಾಂಕ್ ಖಾತೆ ವಿವರಗಳನ್ನು ಕೇಳಿದ. ತಾನು ಎಲ್ಲ ವಿವರಗಳನ್ನು ನೀಡಿದೆ. ಆಗ ಕರೆ ಮಾಡಿ ನಿಮ್ಮ ಖಾತೆಯಲ್ಲಿರುವ ಎಲ್ಲ ಹಣವನ್ನು ಆರ್‌ಬಿಐಗೆ ವರ್ಗಾಯಿಸಬೇಕಾಗಿದೆ. ಆದರೆ ಆ ರೀತಿ ವರ್ಗಾಯಿಸಿದರೆ ನಿಮ್ಮ ಮೇಲೆ ಸಂದೇಹ ಬರುತ್ತದೆ. ಹಾಗಾಗಿ ಶಿವಾನಿ ಎಂಟರ್‌ಪ್ರೈಸಸ್‌ನ ಖಾತೆಗೆ ವರ್ಗಾವಣೆ ಮಾಡಿ ಎಂದು ಬ್ಯಾಂಕ್ ಖಾತೆ ಸಂಖ್ಯೆ ನೀಡಿದ್ದ. ತಾನು ಅ.19ರಂದು 50 ಲ.ರೂ. ಹಣವನ್ನು ಆಕಾಶ ಕುಲ್ಲಹಾರಿ ನೀಡಿದ ಖಾತೆಗೆ ವರ್ಗಾವಣೆ ಮಾಡಿದೆ. ಹಣ ವರ್ಗಾವಣೆಯ ರಶೀದಿಯನ್ನು ಆಕಾಶ ಕಲ್ಲಹಾರಿಗೆ ವಾಟ್ಸ್ಆ್ಯಪ್ ಮೂಲಕ ಕಳುಹಿಸಿದೆ. ನಿಮ್ಮ ಹಣವನ್ನು ಮೂರು ದಿನಗಳ ನಂತರ ಮರುಪಾವತಿ ಮಾಡುತ್ತೇನೆಂದು ತಿಳಿಸಿದ್ದ. ಅ.23ರಂದು ಆಕಾಶ ಕುಲ್ಲಹಾರಿಗೆ ಕರೆ ಮಾಡಿ ಹಣದ ಬಗ್ಗೆ ವಿಚಾರಿಸಿದಾಗ ಹಣವನ್ನು ನಿಮ್ಮ ಖಾತೆಗೆ ವರ್ಗಾವಣೆ ಮಾಡುತ್ತೇನೆ. ಆದರೆ ನೀವು ಬೇರೊಂದು ಬ್ಯಾಂಕ್ ಖಾತೆಗೆ ಕೆಲವು ಮೊತ್ತವನ್ನು ವರ್ಗಾವಣೆ ಮಾಡಬೇಕೆಂದು ತಿಳಿಸಿದ. ಆ ಸಂದರ್ಭ ತನಗೆ ಸಂದೇಹ ಉಂಟಾಗಿದೆ ಎಂದು ವಂಚನೆಗೆ ಒಳಗಾದ ವ್ಯಕ್ತಿ ಕದ್ರಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!