Sunday, June 29, 2025
spot_imgspot_img
spot_imgspot_img

ಮಂಗಳೂರು: ಕೆಲಸಕ್ಕೆಂದು ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ..!

- Advertisement -
- Advertisement -

ಮಂಗಳೂರು: ಕೂಲಿ ಕೆಲಸಕ್ಕೆ ಹೋದ ಕಾರ್ಮಿಕರೋರ್ವರು ಮನೆಗೆ ವಾಪಸು ಬಾರದೇ ನಾಪತ್ತೆಯಾದ ಘಟನೆ ಮಂಗಳೂರುನಗರದ ನಾಗುರಿಯಲ್ಲಿ ನಡೆದಿದೆ.

ನಾಪತ್ತೆಯಾದ ವ್ಯಕ್ತಿಯನ್ನು ನಗರದ ನಾಗುರಿಯಲ್ಲಿ ವಾಸವಿದ್ದ ಕೂಲಿ ಕಾರ್ಮಿಕ ರಮೇಶ್ ಹಡಪದ (40) ಎಂದು ಗುರುತಿಸಲಾಗಿದೆ.

ರಮೇಶ್ ಹಡಪದ ಎಂಬವರು ಮಾ.19ರಂದು ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ಬಿಲ್ಡಿಂಗ್ ಕೂಲಿ ಕೆಲಸಕ್ಕೆ ಹೋದವರು ಸಂಜೆಯಾದರೂ ಮನೆಗೆ ಮನೆಗೆ ವಾಪಸು ಬಾರದೇ ನಾಪತ್ತೆಯಾಗಿದ್ದಾರೆ.

5.5 ಅಡಿ ಎತ್ತರದ, ಗೋಧಿ ಮೈಬಣ್ಣದ, ಸಾಧಾರಣ ಶರೀರ ಹೊಂದಿರುವ ಇವರು ಕಾಣೆಯಾದ ದಿನ ಬಿಳಿ ಬಣ್ಣದ ಶರ್ಟ್, ಕಪ್ಪು ಹಾಗೂ ಕೆಂಪು ಮಿಶ್ರಿತ ಪ್ಯಾಂಟ್ ಧರಿಸಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾರೆ. ಇವರನ್ನು ಕಂಡವರು ಮಂಗಳೂರು ಗ್ರಾಮಾಂತರ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

- Advertisement -

Related news

error: Content is protected !!