- Advertisement -
- Advertisement -
ಮಂಗಳೂರು: ದೇವಸ್ಥಾನದ ಪ್ರಾಂಗಣದಲ್ಲಿ ಪ್ರದಕ್ಷಿಣೆ ಹಾಕುತ್ತಿರುವ ಸಂದರ್ಭದಲ್ಲಿಯೇ ಕುಸಿದ್ದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಸುರತ್ಕಲ್ ನಲ್ಲಿ ನಡೆದಿದೆ. ಸುರತ್ಕಲ್ ನ ಇಡ್ಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುತ್ತಾ ಇರುವಾಗಲೇ ವ್ಯಕ್ತಿಯೊಬ್ಬರು ದೇವರ ಪಾದ ಸೇರಿಕೊಂಡಿದ್ದಾರೆ.
ಮೃತರನ್ನು ಕೃಷ್ಣ ಭಟ್ (52)ಎಂದು ಗುರುತಿಸಲಾಗಿದ್ದು ಅವರು ಮೂಲ್ಕಿಯ ನಿವಾಸಿಯಾಗಿದ್ದಾರೆ. ಮುಲ್ಕಿ ದೇವಸ್ಥಾನದ ಸಿಸಿಟಿವಿಯಲ್ಲಿ ಕೃಷ್ಣ ಭಟ್ ಅವರು ಕುಸಿದು ಬೀಳುತ್ತಿರುವ ದೃಶ್ಯ ಸೆರೆಯಾಗಿದೆ.
ಸುರತ್ಕಲ್ ನ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದ ಸಂದರ್ಭ ಅವರಿಗೆ ಏಕಾಏಕಿ ಹೃದಯಾಘಾತ ಸಂಭವಿಸಿತ್ತು ಎನ್ನಲಾಗಿದೆ. ಸ್ಥಳದಲ್ಲಿದ್ದ ಇತರ ಭಕ್ತರು ಅವರ ರಕ್ಷಣೆಗೆ ಧಾವಿಸಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಆಸ್ಪತ್ರೆ ತಲುಪುವಷ್ಟರಲ್ಲಿ ಕೃಷ್ಣ ಭಟ್ ಅವರು ಕೊನೆಯುಸಿರೆಳೆದಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.
- Advertisement -