- Advertisement -
- Advertisement -



ಮಂಗಳೂರು: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಣಿಕರೊಬ್ಬರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಕುತ್ತಾರು ಮದನಿನಗರ ನಿವಾಸಿ ಅಬ್ದುಲ್ ಅಝೀಝ್ ಆರ್.ಕೆ.ಸಿ. (42) ಎಂದು ಗುರುತಿಸಲಾಗಿದೆ.
ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮ ಪಂಚಾಯತ್ ಸದಸ್ಯ, ಕಾಂಗ್ರೆಸ್ ಪಕ್ಷದ ಗ್ರಾಮ ಸಮಿತಿ ಅಧ್ಯಕ್ಷರಾಗಿದ್ದ ಅಬ್ದುಲ್ ಅಝೀಝ್ ಉದ್ಯಮಿಯಾಗಿದ್ದು, ವ್ಯವಹಾರ ನಿಮಿತ್ತ ದಿಲ್ಲಿಗೆ ತೆರಳಿದ್ದರು. ದಿಲ್ಲಿಯಿಂದ ಮಂಗಳೂರಿಗೆ ರೈಲಿನಲ್ಲಿ ಹಿಂದಿರುಗುತ್ತಿದ್ದಾಗ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸಮೀಪ ಅವರಿಗೆ ಎದೆ ನೋವು ಅನುಭವಕ್ಕೆ ಬಂದಿದೆ. ಮುಂದಿನ ನಿಲ್ದಾಣ ಕುಮಟಾದಲ್ಲಿ ರೈಲಿನಿಂದ ಇಳಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರೂ ಅಷ್ಟರಲ್ಲಿ ಅವರು ಮೃತ ಪಟ್ಟಿದ್ದರು. ಮೃತರು ತಾಯಿ, ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
- Advertisement -