- Advertisement -
- Advertisement -
ಮಂಗಳೂರು: 12 ವರ್ಷಗಳ ಹಿಂದೆ ಸುಳ್ಯದಲ್ಲಿ ನಡೆದಿದ್ದ ರಾಮಕೃಷ್ಣ ರಾವ್ ಅವರ ಕೊಲೆ ಪ್ರಕರಣದ ವಿಚಾರಣೆಗಾಗಿ ಇಂದು ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ಕೆ.ವಿ. ವೆಂಕಟರಮಣ ಕುರುಂಜಿ ಅವರ ಪುತ್ರ ಡಾ. ರೇಣುಕಾ ಪ್ರಸಾದ್ ಅವರು ಪುತ್ತೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಆದರೆ ಪುತ್ತೂರಿನ 5ನೇ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ರಜೆಯಲ್ಲಿ ಇರುವುದರಿಂದ ಪ್ರಭಾರ ಅಧಿಕಾರದಲ್ಲಿರುವ 6ನೇ ಜಿಲ್ಲಾ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಯಿತು. ಡಾ. ರೇಣುಕಾ ಪ್ರಸಾದ್ ಅವರು ಮಂಗಳೂರಿನ 6ನೇ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ವಿಚಾರಣೆ ಪೂರ್ಣಗೊಳಿಸಿದ್ದ ಹೈಕೋರ್ಟ್ ಪ್ರಕರಣದಲ್ಲಿ 6 ಮಂದಿಯನ್ನು ದೋಷಿಗಳೆಂದು ತೀರ್ಪು ನೀಡಿತ್ತು.
- Advertisement -