Sunday, June 29, 2025
spot_imgspot_img
spot_imgspot_img

ಮಂಗಳೂರು: (ಏ. 9) ರಾಜ್ಯ ಬಿಜೆಪಿ ವತಿಯಿಂದ ಜನಾಕ್ರೋಶ ಯಾತ್ರೆ

- Advertisement -
- Advertisement -

ಮಂಗಳೂರು: ರಾಜ್ಯದಲ್ಲಿ ಹಾಲು, ವಿದ್ಯುತ್ ಸಹಿತ ಬೆಲೆ ಏರಿಕೆ ಮಾಡಿರುವುದು ಹಾಗೂ ಬಜೆಟ್‌ನಲ್ಲಿ ಮುಸ್ಲಿಂ ಓಲೈಕೆಯ ಸರಕಾರದ ಕ್ರಮವನ್ನು ಖಂಡಿಸಿ ರಾಜ್ಯ ಬಿಜೆಪಿ ವತಿಯಿಂದ ಜನಾಕ್ರೋಶ ಯಾತ್ರೆಯು ಎ.9ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಹಿತ ಹಿರಿಯ ನಾಯಕರು ಭಾಗವಹಿಸುವ ನಿರೀಕ್ಷೆ ಇದ್ದು, ಪಾದಯಾತ್ರೆ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಬಾರಿಯ ಯುಗಾದಿ ರಾಜ್ಯದ ಜನರಿಗೆ ಖುಷಿ ತಂದಿಲ್ಲ ಎಲ್ಲರೂ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದಾರೆ. ಒಂದೆಡೆ ದಿನನಿತ್ಯ ಬಳಕೆ ವಸ್ತುಗಳ ದರ ಏರಿದ್ದರೆ ಇನ್ನೊಂದೆಡೆ ವಿದ್ಯುತ್ ದರ, ಹಾಲು ಮೊಸರಿನ ದರ ಏರಿದೆ. ನೋಂದಣಿಯ ಶುಲ್ಕ, ವೈದ್ಯಕೀಯ ಪ್ರಮಾಣ ಪತ್ರ ಶುಲ್ಕ, ಮರಣಪ್ರಮಾಣ ಪತ್ರ ಶುಲ್ಕ ಹೀಗೆ ಸಾಲು ಸಾಲು ದರ ಏರಿಕೆಯಾಗಿದ್ದರಿಂದ ಜನತೆ ಬಸವಳಿದಿದೆ ಎಂದರು.

ಎಲ್ಲವೂ ಉಚಿತ ಎಂದು ಮರುಳು ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ತನ್ನ ಗ್ಯಾರಂಟಿಗಳನ್ನೇ ಈಡೇರಿಸಲು ಸಾಧ್ಯವಾಗುತ್ತಿಲ್ಲ. ಜನರಿಗೆ ಯಾವುದೂ ಉಚಿತವಿಲ್ಲ. ಈ ಬಗ್ಗೆ ಚರ್ಚೆಗೆ ಹೊರಟರೆ ಕಾಂಗ್ರೆಸ್ ವಿಧಾನಸೌಧದಿಂದ ಪಲಾಯನ ಮಾಡುತ್ತದೆ. ಬಿಜೆಪಿ ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡುವ ಮೂಲಕ ಅನ್ಯಾಯವೆಸಗಿದೆ ಎಂದು ಟೀಕಿಸಿದರು.

ಕ್ರಿಯಾಶೀಲ ಶಾಸಕರನ್ನು ತಡೆಯಲು ಕಾಂಗ್ರೆಸ್ ಪಕ್ಷದವರಂತೆಯೇ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ವರ್ತಿಸಿ ಆರು ತಿಂಗಳಿಗೆ ಅಮಾನತು ಮಾಡಿದ್ದಾರೆ. ಅಲ್ಲದೆ ಉದ್ದಟತನದ ಹೇಳಿಕೆ ಕೊಟ್ಟು ಒಂದು ವರ್ಷ ಬೇಕಾದರೂ ಅಮಾನತು ಮಾಡಬೇಕು ಎಂದಿದ್ದಾರೆ. ಇದನ್ನು ಜನ ಗಮನಿಸುತ್ತಿದ್ದು, ತಕ್ಕ ಬುದ್ಧಿ ಕಲಿಸುತ್ತಾರೆ ಎಂದರಲ್ಲದೇ, ಖಾದರ್ ಅವರಿಗೆ ಸ್ಪೀಕ‌ರ್ ಆಗಲು ಬಿಜೆಪಿ ಕೂಡಾ ಬೆಂಬಲಿಸಿತ್ತು. ಅವಿರೋಧವಾಗಿ ಅವರು ಆಯ್ಕೆಯಾಗಿದ್ದರು. ಆಗ ಜಿಲ್ಲೆಯ ಜನರಿಗೆ ಅವರಿಂದ ಸಾಕಷ್ಟು ನಿರೀಕ್ಷೆ ಇತ್ತು. ಆದರೆ ಅದೆಲ್ಲವನ್ನೂ ಹುಸಿಗೊಳಿಸಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್, ಪ್ರೇಮಾನಂದ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಡಾ. ಮಂಜುಳಾ ರಾವ್, ಯುವ ಮೋರ್ಚಾ ಅಧ್ಯಕ್ಷ ನಂದನ್‌ ಮಲ್ಯ ಎಸ್‌ಸಿ ಮೋರ್ಚಾ ಅಧ್ಯಕ್ಷ ಜಗನ್ನಾಥ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಮಹೇಶ್‌ ಜೋಗಿ, ಜಿಲ್ಲಾ ವಕ್ತಾರ ಅರುಣ್ ಜಿ.ಶೇಟ್, ಮಾಧ್ಯಮ ಸಹ ಸಂಯೋಜಕ ಮನೋಹರ ಶೆಟ್ಟಿ, ಸಂಜಯ ಪ್ರಭು ಉಪಸ್ಥಿತರಿದ್ದರು.

- Advertisement -

Related news

error: Content is protected !!