Sunday, June 29, 2025
spot_imgspot_img
spot_imgspot_img

ಮಂಗಳೂರು: ಮೀನು ವ್ಯಾಪಾರಿ ಕೊಲೆ ಯತ್ನ; ಲೋಕೇಶ್​​ ಕೋಡಿಕೆರೆ ಬಂಧನ..!

- Advertisement -
- Advertisement -

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದ ದಿನ ರಾತ್ರಿ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಹಾಗೂ ಗ್ಯಾಂಗ್​ ಪ್ರತೀಕಾರಕ್ಕೆ ಯತ್ನಿಸಿತ್ತು. ಕುಂಟಿಕಾನ ಬಳಿ ಉಳ್ಳಾಲ ನಿವಾಸಿ ಲುಕ್ಮಾನ್ ಎಂಬ ಮೀನಿನ ವ್ಯಾಪಾರಿಯನ್ನು ಅಟ್ಟಾಡಿಸಿ ಕೊಲೆಗೆ ಯತ್ನಿಸಿತ್ತು. ಇನ್ನೋವಾ ಕಾರಿನಲ್ಲಿ ಬಂದು ದಾಳಿ ಮಾಡಿತ್ತು. ಇದೀಗ ಕಾವೂರು ಪೊಲೀಸರು ಲೋಕೇಶ್​​ನನ್ನು ಬಂಧಿಸಿದ್ದಾರೆ.

ಉಳ್ಳಾಲ ನಿವಾಸಿ ಲುಲ್ಮಾನ್ ಹಲ್ಲೆಗೊಳಗಾಗಿದ್ದ ಮೀನು ವ್ಯಾಪಾರಿ. ಮೀನುಗಾರ ಮಹಿಳೆ ಬೊಬ್ಬೆ ಹಾಕಿದ ಹಿನ್ನೆಲೆಯಿಂದಾಗಿ ಮೀನು ವ್ಯಾಪಾರಿ ಬಚಾವ್ ಆಗಿದ್ದ. ಇನ್ನೋವಾ ಕಾರಿನಲ್ಲಿ ಬಂದು ಲೋಕೇಶ್ ಗ್ಯಾಂಗ್ ಆತನ ಮೇಲೆ ಅಟ್ಯಾಕ್ ಮಾಡಿತ್ತು. ಈ ಹಿನ್ನಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಸುಹಾಸ್ ಶೆಟ್ಟಿ ಕೊಲೆ ನಂತರ ಮಂಗಳೂರಿನ ಮೂರು ಕಡೆ ಚಾಕು ಇರಿತ ಪ್ರಕರಣಗಳು ವರದಿಯಾಗಿದ್ದವು. ಒಟ್ಟಾರೆಯಾಗಿ 7 ಮಂದಿಯನ್ನು ಬಂಧಿಸಲಾಗಿತ್ತು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಮಂಗಳೂರಿನಲ್ಲಿ ಮತ್ತಿಬ್ಬರು ಹಿಂದೂ ಮುಖಂಡರಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಬೆದರಿಕೆ ಹಾಕಲಾಗಿತ್ತು.

- Advertisement -

Related news

error: Content is protected !!