ಬೆಂಗಳೂರಿನ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ದ್ವಿತೀಯ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಕಾಲೇಜಿನ ಎಂಟನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮೃತ ವಿದ್ಯಾರ್ಥಿಯನ್ನು ಆದಿತ್ಯ ಪ್ರಭು (19) ಎಂದು ಗುರುತಿಸಲಾಗಿದೆ. ಬಿಇ ವಿದ್ಯಾರ್ಥಿ ಆಗಿರುವ ಆದಿತ್ಯ ಪ್ರಭು ಮಂಗಳೂರು ಮೂಲದವನು ಎಂದು ತಿಳಿದು ಬಂದಿದೆ. ಅಷ್ಟಕ್ಕೂ ಆತ್ಮಹತ್ಯೆಗೆ ಕಾರಣವೇನು ಎಂದು ಗಮನಿಸಿದರೆ, ಪರೀಕ್ಷೆ ನಡೆಯುತ್ತಿದ್ದ ಸಂದರ್ಭ ವಿದ್ಯಾರ್ಥಿ ಮೊಬೈಲ್ ನೋಡಿಕೊಂಡು ಕಾಪಿ ಮಾಡುತ್ತಿದ್ದ. ಇದನ್ನು ಗಮನಿಸಿದ ಉಪನ್ಯಾಸಕರು ಆತನ ಮೊಬೈಲ್ ಕಸಿದುಕೊಂಡು ಎಕ್ಸಾಮ್ ಹಾಲ್ ನಿಂದ ಹೊರಕ್ಕೆ ಕಳುಹಿಸಿದ್ದಾರೆ. ಆ ಬಳಿಕ ವಿದ್ಯಾರ್ಥಿಯ ಪೋಷಕರಿಗೂ ಕೂಡ ಈ ವಿಚಾರ ತಿಳಿಸಿದ್ದಾರೆ.
ಉಪನ್ಯಾಸಕರು ತನ್ನ ತಾಯಿಗೆ ವಿಚಾರ ತಿಳಿಸಿದ್ದನ್ನು ತಿಳಿದು ಎಲ್ಲರೆದುರು ಮರ್ಯಾದೆ ಹೋಯಿತು ಎಂದು ವಿದ್ಯಾರ್ಥಿ ಪಿಇಎಸ್ ಕಾಲೇಜಿನ 8ನೇ ಮಹಡಿ ಮೇಲಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಕಾಲೇಜು ಆಡಳಿತ ಮಂಡಳಿಯು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ವಿಚಾರವನ್ನು ಮೃತ ವಿದ್ಯಾರ್ಥಿಯ ಪೋಷಕರಿಗೂ ತಿಳಿಸಿದ್ದಾರೆ. ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿ, ಮರಣೋತ್ತರ ಪರೀಕ್ಷೆಯನ್ನು ನಡೆಸಿದ ಬಳಿಕ ಪೋಷಕರಿಗೆ ಹಸ್ತಾಂತರ ಮಾಡುವ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.
ಉಪನ್ಯಾಸಕರು ತನ್ನ ತಾಯಿಗೆ ವಿಚಾರ ತಿಳಿಸಿದ್ದನ್ನು ತಿಳಿದು ಎಲ್ಲರೆದುರು ಮರ್ಯಾದೆ ಹೋಯಿತು ಎಂದು ವಿದ್ಯಾರ್ಥಿ ಪಿಇಎಸ್ ಕಾಲೇಜಿನ 8ನೇ ಮಹಡಿ ಮೇಲಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಕಾಲೇಜು ಆಡಳಿತ ಮಂಡಳಿಯು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ವಿಚಾರವನ್ನು ಮೃತ ವಿದ್ಯಾರ್ಥಿಯ ಪೋಷಕರಿಗೂ ತಿಳಿಸಿದ್ದಾರೆ. ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿ, ಮರಣೋತ್ತರ ಪರೀಕ್ಷೆಯನ್ನು ನಡೆಸಿದ ಬಳಿಕ ಪೋಷಕರಿಗೆ ಹಸ್ತಾಂತರ ಮಾಡುವ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.