- Advertisement -
- Advertisement -





ಮಂಗಳೂರು: ಬೇಕರಿಯೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಐದು ಲಕ್ಷಕ್ಕೂ ಅಧಿಕ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಮಂಗಳೂರಿನ ಪಾಂಡೇಶ್ವರದ ಬಳಿ ನಡೆದಿದೆ.
ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಅಂಗಡಿ ಬೆಂಕಿಗಾಹುತಿಯಾದ ದುರಂತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಅಂದಾಜಿಸಲಾಗಿದೆ.
ಇಂದು (ಏ.29) ಮುಂಜಾನೆ ಈ ದುರಂತ ಬೆಳಕಿಗೆ ಬಂದಿದೆ. ಅಘಘಡದಿಂದ ಐದು ಲಕ್ಷಕ್ಕೂ ಅಧಿಕ ಮೊತ್ತದ ವಸ್ತು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ಮಾಡುವ ಮೂಲಕ ಬೆಂಕಿಯನ್ನು ನಂದಿಸಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -