Thursday, July 23, 2026
spot_imgspot_img
spot_imgspot_img

ಮಂಗಳೂರು: ಚಲಿಸುತ್ತಿದ್ದ ಕಾರ್‍ ನಲ್ಲಿ ಬೆಂಕಿ; ಚಾಲಕ ಅಪಾಯದಿಂದ ಪಾರು

- Advertisement -
- Advertisement -

ಮಂಗಳೂರು: ಕೋಟೆಕಾರಿನ ಅಡ್ಕ ಎಂಬಲ್ಲಿ ಚಲಿಸುತ್ತಿದ್ದ ಓಮ್ನಿ ಕಾರ್‍ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಹಿಂದಿನಿಂದ ಬರುತ್ತಿದ್ದ ವಾಹನ ಸವಾರರ ಸಮಯಪ್ರಜ್ಞೆಯಿಂದಾಗಿ ಚಾಲಕ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಗುರುವಾರ ಸಂಭವಿಸಿದೆ.

ತಲಪಾಡಿ ನಿವಾಸಿ ರಿಯಾಜ್ ಎಂಬವರು ಗುರುವಾರ ಮಧ್ಯಾಹ್ನ ಅಡ್ಕದ ಗ್ಯಾರೇಜ್‌ನಿಂದ ರಿಪೇರಿ ಮುಗಿದಿದ್ದ ತಮ್ಮ ಕಾರ್‍ ಅನ್ನು ಪಡೆದುಕೊಂಡು ಬರುತ್ತಿದ್ದರು. ಪೆಟ್ರೋಲ್ ಬಂಕ್‌ನಲ್ಲಿ ಇಂಧನ ತುಂಬಿಸಿ ತಲಪಾಡಿಯತ್ತ ತೆರಳುತ್ತಿದ್ದಾಗ ವಾಹನದಲ್ಲಿ ಹೊಗೆ ಕಾಣಿಸಿಕೊಂಡಿದ್ದು, ವಾಹನಕ್ಕೆ ಬೆಂಕಿ ತಗುಲಿರುವುದು ರಿಯಾಜ್ ಅವರ ಗಮನಕ್ಕೆ ಬಂದಿರಲಿಲ್ಲ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಮತ್ತೊಬ್ಬ ವಾಹನ ಸವಾರರು ಬೆಂಕಿ ಕಾಣಿಸಿಕೊಂಡ ಬಗ್ಗೆ ರಿಯಾಜ್ ಅವರನ್ನು ಎಚ್ಚರಿಸಿದ್ದಾರೆ.

ಕೂಡಲೇ ರಿಯಾಜ್ ಅವರು ಹೈವೇ ಪಕ್ಕದಲ್ಲಿ ವಾಹನ ನಿಲ್ಲಿಸಿ ಹೊರಬಂದಿದ್ದು, ಅವರು ಇಳಿಯುತ್ತಿದ್ದಂತೆಯೇ ಕಾರ್‍ ಬೆಂಕಿಗೆ ತುತ್ತಾಗಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಮಾಹಿತಿ ತಿಳಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು ಎನ್ನಲಾಗಿದೆ.

- Advertisement -

Related news

error: Content is protected !!