- Advertisement -
- Advertisement -




ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ವಾಮಂಜೂರು ತಿರುವೈಲು ಮೂಡುಜೆಪ್ಪು ಅಮೃತೇಶ್ವರ ದೇವಸ್ಥಾನದ ಬಳಿಯ ನಿವಾಸಿ ನದೀಂ(34) ಎಂದು ಗುರುತಿಸಲಾಗದೆ.
ಈತ ಬಂಗ್ರ ಕೂಳೂರು ಕಡೆಗೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಮಾದಕ ವಸ್ತುಗಳನ್ನಿಟ್ಟು ಗಿರಾಕಿಗಳಿಗಾಗಿ ಕಾಯುತ್ತಿದ್ದ ಎನ್ನಲಾಗಿದ್ದು, ಈತನ ವಶದಲ್ಲಿದ್ದ ಅಂದಾಜು 56,000 ರೂ. ಮೌಲ್ಯದ ಮಾದಕ ವಸ್ತುಗಳು, ಮೊಬೈಲ್ ಫೋನ್, 7 ಡೆಬಿಟ್ ಕಾರ್ಡ್ಗಳು ಮತ್ತು ಕಾರನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
- Advertisement -