Saturday, June 28, 2025
spot_imgspot_img
spot_imgspot_img

ಮಂಗಳೂರು: ಅಕ್ರಮ ಕಟ್ಟಿಗೆ ಸಾಗಾಟದ ವಾಹನ ವಶ..!

- Advertisement -
- Advertisement -

ಮಂಗಳೂರು: ಅನುಮತಿ ಇಲ್ಲದೆ ಅಕ್ರಮವಾಗಿ ವಿವಿಧ ಜಾತಿಯ ಕಟ್ಟಿಗೆಯನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ವೇಳೆ ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಯವರು ಮಂಗಳೂರು ತಾಲ್ಲೂಕು ಬಡಗ ಉಳಿಪ್ಪಡಿ ಗ್ರಾಮದ ಗಂಜಿಮಠ ಎಂಬಲ್ಲಿ ಕಾರ್ಯಾಚರಣೆ ಮಾಡಿ ವಶಕ್ಕೆಪಡೆದುಕೊಂಡಿರುತ್ತಾರೆ .

ಮಂಗಳೂರು ತಾಲೂಕು ಬಡಗ ಉಳಿಪ್ಪಾಡಿ ಗ್ರಾಮದ ಗಂಜಿಮಠ ಎಂಬಲ್ಲಿ ವಾಹನ ತಪಾಸಣೆಯಲ್ಲಿ ನಿರತರಾಗಿದ್ದ ವೇಳೆ ಮೂಡಬಿದ್ರೆ ಕಡೆಯಿಂದ ಕಟ್ಟಿಗೆಯನ್ನು ಹೇರಿಕೊಂಡು ಬರುತ್ತಿದ್ದ ಲಾರಿಯನ್ನು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ತಡೆದ ಪರಿಶೀಲಿಸಿದಾಗ ಇದಕ್ಕೆ ಯಾವುದೇ ದಾಖಲೆಪತ್ರ ಇಲ್ಲದಿರುವುದು ಕಂಡು ಬಂದಿದೆ. ತಕ್ಷಣ ಲಾರಿ ಸಹಿತ ಕಟ್ಟಿಗೆಯನ್ನು ವಶಪಡಿಸಿಕೊಂಡಿದ್ದು, ಇದರ ಒಟ್ಟು ಮೌಲ್ಯ 2.5ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಮಂಗಳೂರು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಕಾಂತ್ ಖಣದಾಳೆ ನೇತೃತ್ವದಲ್ಲಿ ವಲಯ ಅರಣ್ಯಾಧಿಕಾರಿ ಕುಮಾರ್ ಸ್ವಾಮಿ ,ಉಪ ವಲಯ ಅರಣ್ಯಾಧಿಕಾರಿ ಪ್ರಶಾಂತ ಪೂಜಾರಿ, ಅಶ್ವಿಥ್ ಗಟ್ಟಿ,ವಿನಯ ಕುಮಾರ್,ಶಿವಾನಂದ ಮಾಧರ,ವಾಹನ ಚಾಲಕ ಜಯಪ್ರಕಾಶ್ ಕಾರ್ಯಾಚರಣೆ ಯಲ್ಲಿ ಪಾಲ್ಗೊಂಡಿರುತ್ತಾರೆ. ಆರೋಪಿ ವಾಹನ ಚಾಲಕ ಹಮೀದ್ ವಾಲ್ಪಾಡಿ ಎಂಬವನ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.

- Advertisement -

Related news

error: Content is protected !!