Sunday, June 29, 2025
spot_imgspot_img
spot_imgspot_img

ಮಾಣಿ: (ಅ.20) ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್, ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ವತಿಯಿಂದ ” ನಿರೀಕ್ಷೆಗಳ ನೀಲ ನಕ್ಷೆ ” ಸಾಹಿತ್ಯೋತ್ಸವ

- Advertisement -
- Advertisement -

ಮಾಣಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್, ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ವತಿಯಿಂದ ” ನಿರೀಕ್ಷೆಗಳ ನೀಲ ನಕ್ಷೆ ” ಎಂಬ ಸ್ಲೋಗನ್‌ನೊಂದಿಗೆ ಸಾಹಿತ್ಯೋತ್ಸವ ಕಾರ್ಯಕ್ರಮವು ಅ. 20ನೇ ಆದಿತ್ಯವಾರ ಸೂರಿಕುಮೇರು ಮಸೀದಿ ಬಳಿಯ ಆಟದ ಮೈದಾನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಉದ್ಘಾಟಿಸಿ ದುಆ ನಡೆಸಿಕೊಡಲಿದ್ದಾರೆ.
ಧ್ವಜಾರೋಹಣವನ್ನು ಬಂಡಾಡಿ ಮುಹಮ್ಮದ್ ಹಾಜಿ ಸೂರಿಕುಮೇರು, ಪತ್ರಕರ್ತ ಲತೀಫ್ ನೇರಳಕಟ್ಟೆ ನೆರವೇರಿಸಲಿದ್ದಾರೆ.

ಬಳಿಕ ಮಾಣಿ ಸೆಕ್ಟರ್ ವ್ಯಾಪ್ತಿಯ ಪಾಟ್ರಕೋಡಿ, ಮಿತ್ತೂರು, ಸೂರ್ಯ, ನೇರಳಕಟ್ಟೆ, ಶೇರಾ ಬುಡೋಳಿ, ಸೂರಿಕುಮೇರು ಯುನಿಟ್‌ಗಳ ಪ್ರತಿಭೆಗಳ ಮಧ್ಯೆ ಸಾಹಿತ್ಯೋತ್ಸವ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ.

ಸಂಜೆ ನಡೆಯುವ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಉಲಮಾ ಉಮರಾ ಸಾಮಾಜಿಕ ನಾಯಕರುಗಳು, ಸೆಕ್ಟರ್, ಯುನಿಟ್ ಪ್ರತಿನಿಧಿಗಳು, ಭಾಗವಹಿಸಲಿದ್ದಾರೆ.

ಮರ್‌ಹೂಂ ಸರ್ಫ್ರಾಝ್ ನೆಲ್ಲಿ ನಗರ, ಮರ್‌ಹೂಂ ಅಬ್ಬಾಸ್ ಪಟ್ಲಕೋಡಿ ವೇದಿಕೆ, ಮರ್‌ಹೂಂ ಇರ್ಶಾದ್ ಉಮ್ಮರ್ ವೇದಿಕೆ, ಮರ್‌ಹೂಂ ಬಿನ್ಯಾಮಿನ್ ಝುಹ್ರಿ ವೇದಿಕೆ, ಮರ್‌ಹೂಂ ಅಬ್ದುಲ್ ರಝಾಕ್ ವೇದಿಕೆಗಳಲ್ಲಿ ಕಾರ್ಯಕ್ರಮ ಮತ್ತು ಸ್ಪರ್ಧೆಗಳು ನಡೆಯಲಿದೆ ಎಂದು ಸೆಕ್ಟರ್ ಅಧ್ಯಕ್ಷ ಸಾಬಿತ್ ಪಾಟ್ರಕೋಡಿ, ಕಾರ್ಯದರ್ಶಿ ಮುಬಶ್ಶಿರ್ ಸ‌ಅದಿ ಸೂರಿಕುಮೇರು, ಕೋಶಾಧಿಕಾರಿ ಇಮ್ರಾನ್ ಮಾಣಿ ಮತ್ತು ಸ್ವಾಗತ ಸಮಿತಿ ಚೇರ್ಮನ್ ಹನೀಫ್ ಸಂಕ, ಕನ್ವೀನರ್ ಹಾಜಿ ಯೂಸುಫ್ ಸಯೀದ್ ನೇರಳಕಟ್ಟೆ, ಫೈನಾನ್ಸ್ ಸೆಕ್ರೆಟರಿ ಯೂಸುಫ್ ಹಾಜಿ, ಮಾಧ್ಯಮ ಕಾರ್ಯದರ್ಶಿ ಸಲೀಂ ಮಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!