- Advertisement -
- Advertisement -
ಮಾಣಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯ ಪಳಿಕೆ ಎಂಬಲ್ಲಿ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಮೂವರಿಗೆ ಗಾಯಗೊಂಡ ಘಟನೆ ನಡೆದಿದೆ.
ಮಾಣಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು, ಎದುರಿನಿಂದ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಬಳಿ ಅದರ ಹಿಂದಿನಿಂದ ಬರುತ್ತಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ.
ಎರಡು ಕಾರು ಮತ್ತು ಆಟೋ ರಿಕ್ಷಾದಲ್ಲಿ ಬೆಂಗಳೂರು, ಬಿಸಿ.ರೋಡ್ ಮೂಲದ ಪ್ರಯಾಣಿಕರಾಗಿದ್ದು, ಆಟೋ ಚಾಲಕ ಬುಡೋಳಿ ನಿವಾಸಿ ಎಂದು ತಿಳಿದು ಬಂದಿದೆ.
- Advertisement -