ಮಾಣಿ : ಪೆರಾಜೆ ಗ್ರಾಮದ ಮಾಣಿ ಸಮೀಪ ವಿದ್ಯಾನಗರ ಪಾಳ್ಯದಲ್ಲಿ ವಿಸ್ತೃತ ಕಟ್ಟಡದಲ್ಲಿ ಆರಂಭಗೊಂಡ ಬಾಲವಿಕಾಸ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ವೆಲ್ಕಮ್ ಡೇ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮವು ಜೂ.1 ರಂದು ಪೆರಾಜೆ ವಿದ್ಯಾನಗರ ಬಾಲವಿಕಾಸ್ ಅಡಿಟೋರಿಯಂನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಮಂಗಳೂರು ಶಕ್ತಿ ಎಜುಕೇಶನ್ ಟ್ರಸ್ಟ್ನ ಸ್ಥಾಪಕ ಡಾ.ಕೆ.ಸಿ ನಾಯ್ಕ್ ದೀಪಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.
ಮಾಣಿ ಬಾಲವಿಕಾಸ್ ಟ್ರಸ್ಟ್ನ ಅಧ್ಯಕ್ಷ ಪ್ರಹ್ಲಾದ್ ಶೆಟ್ಟಿ ಜೆ. ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ಎಂ. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಬಾಲವಿಕಾಸ ಟ್ರಸ್ಟ್ನ ಉಪಾಧ್ಯಕ್ಷ ಯತಿರಾಜ್ ಕೆ.ಎಲ್, ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ., ಟ್ರಸ್ಟಿ ಸುಭಾಶಿಣಿ ಎ.ಶೆಟ್ಟಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಕಸ್ತೂರಿ ಪಿ.ಶೆಟ್ಟಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಾಣಿ ಗ್ರಾ.ಪಂ.ಅಧ್ಯಕ್ಷ ಬಾಲಕೃಷ್ಣ ಆಳ್ವ, ಟ್ರಸ್ಟ್ ಕಾರ್ಯದರ್ಶಿ ಮಹೇಶ್ ಶೆಟ್ಟಿ.ಜೆ, ಶಾಲಾ ಆಡಳಿತಾಧಿಕಾರಿ ರವೀಂದ್ರ ಎ.ದರ್ಬೆ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ವಿಜಯಲಕ್ಷ್ಮೀ ವಿ.ಶೆಟ್ಟಿ ಸ್ವಾಗತಿಸಿದರು. ಶಿಕ್ಷಕಿ ಶೋಭಾ ಎಂ.ಶೆಟ್ಟಿ ವಂದಿಸಿದರು. ಶಿಕ್ಷಕಿಯರಾದ ಜಯಶ್ರೀ ಆಚಾರ್ಯ ಮತ್ತು ಸುಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.