Saturday, June 6, 2026
spot_imgspot_img
spot_imgspot_img

ಮಣಿಪಾಲ: ಆರ್ಯಭಟ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ..!

- Advertisement -
- Advertisement -

ಮಣಿಪಾಲ: ಮಣಿಪಾಲ ಸರಳಬೆಟ್ಟು ಬಾಲಮಿತ್ರ ಯಕ್ಷಗಾನ ಮಂಡಳಿಯ ಸಂಚಾಲಕ, ಆರ್ಯಭಟ ಪ್ರಶಸ್ತಿ ಪುರಸ್ಕೃತ ರಾದ ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನರಾಗಿದ್ದಾರೆ. ಅವರಿಗೆ 59 ವಯಸ್ಸು. ಮಣಿಪಾಲದ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ಇಂದು ಅಸುನೀಗಿದ್ದಾರೆ.

ಯಕ್ಷಗಾನ ಕಲೆಯನ್ನು ವಿದ್ಯಾರ್ಥಿಗಳಲ್ಲಿ ಬಾಲ ಪ್ರತಿಭೆಗಳನ್ನುರೂಪಿಸಿವಲ್ಲಿ ಬಾಲ ಮಿತ್ರ ಯಕ್ಷಗಾನ ಮಂಡಳಿ ಮಣಿಪಾಲದ ಸರಳಬೆಟ್ಟುವಿನಲ್ಲಿ ಸ್ಥಾಪಿಸಿದ್ದರು. ಅಂತರಾಷ್ಟ್ರೀಯ ಮಟ್ಟದಲ್ಲಿ ಸೌತ್ ಆಫ್ರಿಕಾ, ದುಬೈ, ಮೊದಲಾದ ದೇಶಗಳಲ್ಲಿ ಯಕ್ಷಗಾನ ಪ್ರದರ್ಶನ ನೀಡಿದ್ದರು . ದೆಹಲಿ, ಮುಂಬೈ ,ಬೆಂಗಳೂರು, ಮೊದಲಾದ ಕಡೆಯಲ್ಲಿಯೂ ಮಕ್ಕಳ ಯಕ್ಷಗಾನದ ಪ್ರದರ್ಶನ ನೀಡಿದ್ದರು.

ಇತ್ತೀಚೆಗೆ ಅಯೋಧ್ಯೆಯ ಶ್ರೀ ರಾಮಮಂದಿರದಲ್ಲಿ ಮೊಟ್ಟ ಮೊದಲ ಬಾರಿಗೆ ಯಕ್ಷಗಾನ ತಂಡ ಕರೆದುಕೊಂಡು ಹೋಗಿ ಯಕ್ಷಗಾನಪ್ರದರ್ಶನವನ್ನು ಆಯೋಧ್ಯೆಯಲ್ಲಿ ಪೇಜಾವರ ಶ್ರೀಗಳು ಸಹಯೋಗದಲ್ಲಿ ನೀಡಿದ್ದರು. ಇವರನ್ನು ಸನ್ಮಾನಿಸಿದ್ದರು. ಮಣಿಪಾಲದ ಕೆಎಂಸಿಯ ಆಸ್ಪತ್ರೆಯಲ್ಲಿ ಕಣ್ಣಿನ ವಿಭಾಗದಲ್ಲಿ ಉನ್ನತ ಹುದ್ದೆಯಲ್ಲಿದ್ದು. ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ಕಮಲಾಕ್ಷ ಪ್ರಭು ಅವರಿಗೆ, ಪತ್ನಿ, ಇಬ್ಬರು ಗಂಡು ಮಕ್ಕಳನ್ನು, ಹಾಗೂ ಅಪಾರ ಯಕ್ಷ ಕಲಾಭಿಮಾನಿಗಳನ್ನು, ಮತ್ತು ಬಾಲ ಪ್ರತಿಭೆಗಳನ್ನು ಅಗಲಿದ್ದಾರೆ.

- Advertisement -

Related news

error: Content is protected !!