Saturday, June 28, 2025
spot_imgspot_img
spot_imgspot_img

ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ವೈದ್ಯ ಸ್ಥಳದಲ್ಲೇ ಮೃತ್ಯು

- Advertisement -
- Advertisement -

ಮಣಿಪಾಲ: ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ವೈದ್ಯರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ನಡೆದಿದೆ.

ಮೃತ ವೈದ್ಯರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಯ ಡಾ. ಸೂರ್ಯನಾರಾಯಣ ಎಂದು ಗುರುತಿಸಲಾಗಿದೆ. ಇವರು ಮೂಲತಃ ಅವರ ಬೆಂಗಳೂರಿನವರಾಗಿದ್ದಾರೆ. ಜೊತೆಗಿದ್ದ ಅವರ ಗೆಳೆಯರಾದ ಕೇರಳದ ಸಂಗೀತ್ ಮತ್ತು ಉತ್ತರಪ್ರದೇಶದ ದಿವಿತ್ ಸಿಂಗ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಶುಕ್ರವಾರ ರಾತ್ರಿ ಮೂವರು ಗೆಳೆಯರು ಊಟ ಮುಗಿಸಿ ತಮ್ಮ ಫ್ಲ್ಯಾಟ್ ಗೆ ವಾಪಾಸಾಗುತ್ತಿದ್ದ ವೇಳೆ ಹೋಟೆಲ್ ಹಾಟ್ ಆಂಡ್ ಸ್ಪೈಸಿ ಎದುರುಗಡೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು ತಲೆಗೆ ತೀವ್ರಗಾಯಗಳಾಗಿ ಸೂರ್ಯನಾರಾಯಣ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!