Friday, June 5, 2026
spot_imgspot_img
spot_imgspot_img

ಹಾಡುಹಗಲೇ ಬಸ್ ಮಾಲಕನ ಹತ್ಯೆಗೆ ಯತ್ನ- ಮಾರಕಾಸ್ತ್ರಗಳೊಂದಿಗೆ ಬಂದ ಅಪರಿಚಿತರಿಂದ ಬೆದರಿಕೆ

- Advertisement -
- Advertisement -

ಮಣಿಪಾಲ(ನ.4): ಹಾಡುಹಗಲೇ ಬಸ್ ಮಾಲಕನ ಕಛೇರಿಗೆ ನಾಲ್ವರು ಅಪರಿಚಿತರು ಮಾರಕಾಸ್ತ್ರಗಳೊಂದಿಗೆ ಬಂದು ಬೆದರಿಸಿ ಹೋದ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಮಣಿಪಾಲ ಲಕ್ಷ್ಮೀಂದ್ರ ನಗರದಲ್ಲಿ ಕಾರ್ಯಚರಿಸುತ್ತಿರುವ ಎಕೆಎಮ್‌ಎಸ್ ಬಸ್‌ನ ಕಛೇರಿಗೆ ಕಂದು ಬಣ್ಣದ ಡಸ್ಟರ್ ಕಾರಿನಲ್ಲಿ ಬಂದ ದುಷ್ಕರ್ಮಿಗಳು ತಲವಾರು ಹಿಡಿದು ಬಂದಿದ್ದರು ಎನ್ನಲಾಗಿದೆ.

ಕಛೇರಿಯಲ್ಲಿ ಏಳೆಂಟು ಮಂದಿ ಬಸ್ ಮಾಲಕನ ಸಹವರ್ತಿಗಳು ಇದ್ದ ಕಾರಣ ದುಷ್ಕರ್ಮಿಗಳು ಕೇವಲ ಬೆದರಿಸಿ ಪರಾರಿಯಾಗಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.ಬಸ್ ಮಾಲಕ ಸೈಪುದ್ದೀನ್ ಈಗಾಗಲೇ ಹಲವಾರು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು.ಜಾಮೀನಿನ ಮೇಲೆ ಹೊರಗಿದ್ದಾನೆ. ಮಣಿಪಾಲ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು.ದುಷ್ಕರ್ಮಿಗಳು ಬಂದಿದ್ದ ಕಾರು ಮೂಡುಬೆಳ್ಳೆ ಕಡೆ ಪರಾರಿಯಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!