- Advertisement -
- Advertisement -
ಮಂಗಳೂರು: ಬಿಜೆಪಿ ಬೆಂಬಲಿತ ಗ್ರಾ.ಪಂ ಚುನಾವಣೆ ಅಭ್ಯರ್ಥಿ ಮೇಲೆ ವ್ಯಕ್ತಿಯೊಬ್ಬ ಸುತ್ತಿಗೆಯಿಂದ ಹಲ್ಲೆಗೈದಿರುವ ಘಟನೆ ಉಳ್ಳಾಲದ ಮಂಜನಾಡಿ ಸಮೀಪ ನಡೆದಿದೆ.
ರಾಜ್ಯ ಹಜ್ ಕಮಿಟಿ ಸದಸ್ಯ ಹನೀಫ್ ನಿಜಾಮಿ ಎಂಬವರ ತಲೆಗೆ ಸುತ್ತಿಗೆಯಿಂದ ಬಡಿದು ಕೊಲೆಗೆ ಯತ್ನಿಸಲಾಗಿದೆ. ಅಸೈಗೋಳಿ ನಿವಾಸಿ ಕಾಂಗ್ರೆಸ್ ಕಾರ್ಯಕರ್ತರೆನ್ನಲಾದ ಕರೀಂ ಎಂಬಾತ ಈ ಕೃತ್ಯ ಎಸಗಿದ್ದಾನೆಂದು ಆರೋಪಿಸಲಾಗಿದೆ.
ರಾಜ್ಯ ಹಜ್ ಕಮಿಟಿ ಸದಸ್ಯ ಹನೀಫ್ ನಿಜಾಮಿ ಅವರು ಮಂಜನಾಡಿ ಅಸೈ ವಾರ್ಡಿನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದು, ಪಂಚಾಯತ್ ಚುನಾವಣೆಯ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತ ಕೊಲೆಗೆ ಯತ್ನಿಸಿದ್ದಾಗಿ ತಿಳಿದುಬಂದಿದೆ.
ತಲೆಗೆ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ದೇರಳಕಟ್ಟೆ ಸಮೀಪದ ಕಣಚೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾ.ಪಂ ಚುನಾವಣೆ ದ್ವೇಷದಿಂದ ಈ ಕೃತ್ಯ ಎಸಗಿದ್ದಾಗಿ ಆರೋಪಿಸಲಾಗಿದೆ.
- Advertisement -