Friday, March 29, 2024
spot_imgspot_img
spot_imgspot_img

ಪಾಣೆಮಂಗಳೂರು ಸೇತುವೆಯಲ್ಲಿ ಬೈಕ್ ಇಟ್ಟು ನಾಪತ್ತೆಯಾಗಿದ್ದ ಯುವಕ ಶವ ಮಂಜೇಶ್ವರದಲ್ಲಿ ಪತ್ತೆ

- Advertisement -G L Acharya panikkar
- Advertisement -

ಪಾಣೆಮಂಗಳೂರು ಸೇತುವೆಯಲ್ಲಿ ಜು.28ರಂದು ಮುಂಜಾನೆ ಬೈಕೊಂದು ಚಾಲನೆಯಲ್ಲಿಟ್ಟು ಸವಾರ ನಾಪತ್ತೆಯಾಗಿದ್ದ ಘಟನೆ ನಡೆದಿತ್ತು. ಬೆಂಗಳೂರು ಮೂಲದ ಯುವಕನ ಮೃತದೇಹ ಮಂಜೇಶ್ವರದ ಕಣ್ವತೀರ್ಥ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಂಗಳೂರು ದಾಸರಹಳ್ಳಿ ನಿವಾಸಿ ಸತ್ಯವೇಲು (29)ಎಂದು ಗುರುತಿಸಲಾಗಿದೆ. ಕಾಸರಗೋಡು ಕರಾವಳಿ ಪೊಲೀಸರು ಸ್ಥಳಕ್ಕೆ ತಲುಪಿ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಿದ್ದರು.

ಈ ಬಗ್ಗೆ ಕಾಸರಗೋಡು ಪೊಲೀಸರು ಬೆಂಗಳೂರಿನಲ್ಲಿರುವ ಆತನ ಮನೆಯವರಿಗೆ ವಿಷಯ ತಿಳಿಸಿದ್ದು, ಆತನ ಮನೆಯವರು ಇಂದು ಕಾಸರಗೋಡಿಗೆ ತಲುಪಿದ್ದು ಆತನ ಗುರುತು ಪತ್ತೆಹಚ್ಚಿದ್ದಾರೆ. ಬೆಂಗಳೂರಿನ ಖಾಸಗಿ ಕಂಪೆನಿಯೊAದರಲ್ಲಿ ಕೆಲಸ ಮಾಡುತ್ತಿದ್ದ ಸತ್ಯವೇಲು ಜು.28ರಂದು ಮನೆಯಿಂದ ಬೈಕ್ ನಲ್ಲಿ ತೆರಳಿದ್ದು ಬಳಿಕ ನಾಪತ್ತೆಯಾಗಿದ್ದರು. ಈ ಬಗ್ಗೆ ಅವರ ತಾಯಿ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದರು. ಈ ನಡುವೆ ಪಾಣೆಮಂಗಳೂರಿನ ಸೇತುವೆಯಲ್ಲಿ ಈತನ ಬೈಕ್ ಚಾಲನೆಯಲ್ಲಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

- Advertisement -

Related news

error: Content is protected !!