- Advertisement -
- Advertisement -
ಮಂಜೇಶ್ವರ: ಆಭರಣ ಮಳಿಗೆಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಅನ್ನು ಕಟ್ಟಿ ಹಾಕಿ ಸುಮಾರು 15 ಕೆ.ಜಿ ಬೆಳ್ಳಿ ಹಾಗೂ ನಾಲ್ಕು ಲಕ್ಷ ರೂಪಾಯಿಯನ್ನು ಕಳವು ಮಾಡಿದ ಘಟನೆ ಮಂಜೇಶ್ವರದ ಹೊಸಂಗಡಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ಹಲ್ಲೆಗೊಳಗಾದ ಸೆಕ್ಯೂರಿಟಿ ಗಾರ್ಡ್ ಅಬ್ದುಲ್ಲಾ ಎನ್ನಲಾಗಿದೆ. ದರೋಡೆಕೋರರ ಹಲ್ಲೆಯಿಂದಾಗಿ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ಸುಮಾರು ಮೂರು ಗಂಟೆಯ ವೇಳೆಗೆ ದರೋಡೆಕೋರರು ಕೃತ್ಯ ಎಸಗಿದ್ದಾರೆಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
- Advertisement -