- Advertisement -
- Advertisement -
ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ಹೋಟೆಲ್ನ ಪಾಲುದಾರ ಮನೋಜ್ ಪೂಜಾರಿ(38) ಅನಾರೋಗ್ಯದಿಂದ ನಿಧನರಾಗಿದ್ದಾರೆ. ತಲೆಗೆ ಸಂಬಂಧಪಟ್ಟ ಕಾಯಿಗೆಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಬಿ.ಸಿ.ರೋಡಿನ ಶ್ರೀ ಹೋಟೆಲ್ ಊಟಕ್ಕೆ ವಿಶೇಷ ಖ್ಯಾತಿಯನ್ನು ಗಳಿಸಿದ್ದು, ಪ್ರತಿನಿತ್ಯ ನೂರಾರು ಗ್ರಾಹಕರು ನಿತ್ಯವೂ ಅದೇ ಹೋಟೆಲ್ನ ಊಟವನ್ನು ಇಷ್ಟಪಡುತ್ತಿದ್ದರು. ಮನೋಜ್ ಅವರು ಪ್ರತಿ ಗ್ರಾಹಕರನ್ನು ನಗುಮೊಗದಿಂದಲೇ ಬಹಳ ಪ್ರೀತಿಯಿಂದ ಉಪಚರಿಸುತ್ತಿದ್ದರು. ಬಿ.ಸಿ.ರೋಡು ಶ್ರೀ ಅನ್ನಪೂರ್ಣೇಶ್ವರೀ ಸೇವಾ ಸಂಘದ ಕಾರ್ಯದರ್ಶಿಯಾಗಿದ್ದು, ಕೋಟೆಕಣಿ ಶ್ರೀರಾಮ ಮಂದಿರದಲ್ಲಿಯೂ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.
- Advertisement -