Saturday, June 28, 2025
spot_imgspot_img
spot_imgspot_img

ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಜಾಮೀನು ಮಂಜೂರು..!

- Advertisement -
- Advertisement -

ಕೊಪ್ಪಳ: ಜಿಲ್ಲೆಯ ಮರಕುಂಬಿ ಗ್ರಾಮದ ದಲಿತರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕೊಪ್ಪಳ ಜಿಲ್ಲಾ ಕೋರ್ಟ್​ ನೀಡಿದ್ದ ಜೀವಾವಧಿ ಶಿಕ್ಷೆಗೆ ಧಾರವಾಡ ಹೈಕೋರ್ಟ್​ ತಡೆಯಾಜ್ಞೆ ನಿಡಿದೆ. ಅಲ್ಲದೇ 98 ಜನ ಅಪರಾಧಿಗಳಲ್ಲಿ 97 ಮಂದಿಗೆ ಧಾರವಾಡ ಹೈಕೋರ್ಟ ಪೀಠ ಜಾಮೀನು ನೀಡಿದೆ. ಪ್ರಕರಣದ ಎ1 ಮಂಜುನಾಥ ಜಾಮೀನಿಗೆ ಅರ್ಜಿ ಹಾಕದ ಹಿನ್ನೆಲೆಯಲ್ಲಿ ಆತನಿಗೆ ಬೇಲ್​ ಸಿಕ್ಕಿಲ್ಲ. ಪ್ರತಿಯೊಬ್ಬರಿಂದ 50 ಸಾವಿರ ರೂ. ಬೆಲೆಯ ಬಾಂಡ್ ಹಾಗೂ ಒಬ್ಬ ಶ್ಯೂರಿಟಿ ಪಡೆದು ನ್ಯಾಯಾಲಯ ಜಾಮೀನು ನೀಡಿದೆ. ಇನ್ನೂ, ಇದೇ ಪ್ರಕರಣದಲ್ಲಿ ಐದು ವರ್ಷ ಶಿಕ್ಷೆಗೆ ಗುರಿಯಾಗಿದ್ದ ಇಬ್ಬರು ಆರೋಪಿಗಳಿಗೂ ಸಹ ಜಾಮೀನು ಮಂಜೂರಾಗಿದೆ.

2014 ರ ಆಗಸ್ಟ್ 28 ರಂದು ದಲಿತರು ಹಾಗೂ ಸವರ್ಣಿಯರ ನಡುವೆ ಗಲಾಟೆ ನಡೆದಿತ್ತು. ಇದೆ ಅಕ್ಟೋಬರ್ 28 ರಂದು ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ಜೀವಾವದಿ ಶಿಕ್ಷೆ ಘೋಷಣೆ ಮಾಡಿತ್ತು. ತೀರ್ಪು ಪ್ರಶ್ನಿಸಿ ಅಪರಾಧಿಗಳು ಧಾರವಾಡ ಹೈಕೋರ್ಟ ಮೊರೆ ಹೋಗಿದ್ದರು. ಇಂದು (ನ.13) ಹೈಕೋರ್ಟ್​ ದ್ವೀಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿ, ಜಾಮೀನು ನೀಡಿದೆ.

2014ರ ಆಗಸ್ಟ್ 28 ರಂದು ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ಮಂಜುನಾಥ ಮತ್ತು ಸ್ನೇಹಿತರು ಎಂಬುವರು ಪವರ್ ಸಿನಿಮಾ ನೋಡಲು ಗಂಗಾವತಿ ನಗರದಲ್ಲಿರುವ ಶಿವ ಚಿತ್ರಮಂದಿರಕ್ಕೆ ಹೋಗಿದ್ದರು. ಈ ಸಮಯದಲ್ಲಿ ಟಿಕೆಟ್ ತೆಗೆದುಕೊಳ್ಳುವ ವಿಚಾರಕ್ಕೆ ಜಗಳ ಆರಂಭವಾಗಿತ್ತು. ಬಳಿಕ, ಮಂಜುನಾಥ್ ಮತ್ತು ಆತನ ಸ್ನೇಹಿತರು, ನಮ್ಮೂರಿನ ದಲಿತರು ನಮ್ಮ ಮೇಲೆ ಹಲ್ಲೆ ಮಾಡಿಸಿದ್ದಾರೆ ಅಂತ ಗ್ರಾಮದಲ್ಲಿ ಹೇಳಿದ್ದರು. ಇದು ಸವರ್ಣೀಯ ಕುಟುಂಬಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಹೀಗಾಗಿ ಅಂದು ಸಂಜೆ ಗ್ರಾಮದ ಸವರ್ಣೀಯರು, ದಲಿತರ ಕೇರಿ ಮೇಲೆ ದಾಳಿ ಮಾಡಿದ್ದರು. ದಲಿತರಿಗೆ ಸೇರಿದ್ದ ನಾಲ್ಕು ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು. ಅನೇಕರ ಮೇಲೆ ಸಿಕ್ಕಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿದ್ದರು. ಬೆಂಕಿ ಅವಘಡದಲ್ಲಿ ಗುಡಿಸಲುಗಳು ಸುಟ್ಟು ಭಸ್ಮವಾಗಿದ್ದವು. ಅದೃಷ್ಟವೆನ್ನುವಂತೆ ಗುಡಿಸಲುಗಳಲ್ಲಿ ಯಾರು ಇಲ್ಲದೇ ಇದ್ದಿದ್ದರಿಂದ ಅಂದು ಯಾವುದೇ ಪ್ರಾಣಾಪಾಯವಾಗಿರಲಿಲ್ಲ.

ಕೇವಲ ಬೆಂಕಿ ಹಚ್ಚಿದ್ದು ಮಾತ್ರವಲ್ಲ, ಅಂದು 27 ದಲಿತರ ಮೇಲೆ ಹಲ್ಲೆಯಾಗಿತ್ತು. ಈ ಬಗ್ಗೆ ಅಂದು ಘಟನೆಯಲ್ಲಿ ಗಾಯಗೊಂಡವರು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸವರ್ಣೀಯರ ವಿರುದ್ದ ಅಟ್ರಾಸಿಟಿ, ಕೊಲೆಗೆ ಯತ್ನ, ದೊಂಬಿ, ಜೀವ ಬೆದರಿಕೆ ಸೇರಿದಂತೆ ಅನೇಕ ಸೆಕ್ಷನ್​ ಅಡಿಯಲ್ಲಿ ಪ್ರಕರಣಗಳು ದಾಖಲಿಸಿದ್ದರು. 117 ಸವರ್ಣೀಯರ ಮೇಲೆ ಅಂದು ಕೇಸ್ ದಾಖಲಾಗಿತ್ತು. ಮರಕುಂಬಿ ಗ್ರಾಮದಲ್ಲಿ ದಲಿತರ ಮೇಲೆ ನಡೆದಿದ್ದ ದೌರ್ಜನ್ಯ, ದೇಶಾದ್ಯಂತ ಸುದ್ದಿಯಾಗಿತ್ತು. ಘಟನೆ ನಂತರ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ನಂತರ ಎಲ್ಲರು ಜಾಮೀನಿನ ಮೇಲೆ ಹೊರಗಿದ್ದರು. ಆದರೆ, ಕಳೆದ ಹತ್ತು ವರ್ಷಗಳಿಂದ ಪ್ರಕರಣದ ವಿಚಾರಣೆ ನಡೆಯುತ್ತಲೇ ಇತ್ತು.

98 ಜನರಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ಐದು ಸಾವಿರ ದಂಡ ವಿಧಿಸಿದ್ದರೇ, ಎಸ್ಸಿ-ಎಸ್ಟಿ ವರ್ಗಕ್ಕೆ ಸೇರಿದ್ದ ಮೂವರಿಗೆ ಅಟ್ರಾಸಿಟಿ ಕಾಯ್ದೆ ಅನ್ವಯವಾಗದೇ ಇರುವುದರಿಂದ ಐದು ವರ್ಷ ಶಿಕ್ಷೆ, ಎರಡು ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

- Advertisement -

Related news

error: Content is protected !!