



ಕಠ್ಮಂಡು: ಹಿಮಾಲಯ ಪರ್ವತ ಶ್ರೇಣಿಯಲ್ಲಿರುವ ನೇಪಾಳದಲ್ಲಿ ಭೀಕರ ಪ್ರವಾಹ ಸಂಭವಿಸಿದ್ದು, ಭಾರೀ ಪ್ರಮಾಣದಲ್ಲಿ ಹಾನಿಯಾಗಿದೆ.
ನೇಪಾಳ ರಸುವಾದಲ್ಲಿ ಟಿಬೆಟ್ ಗಡಿಯ ಬಳಿಯಿರುವ ಇಡೀ ಗ್ರಾಮವೇ ಕೊಚ್ಚಿಹೋಗಿದ್ದು, ಅಪಾರ ಪ್ರಮಾಣದ ಜೀವಹಾನಿಯಾಗಿರುವ ಭೀತಿ ಹೆಚ್ಚಾಗಿದೆ. ಸ್ಥಳೀಯ ಕಾಲಮಾನ ಇಂದು(ಆ.26) ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು, ನದಿ ದಂಡೆಯಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಅದರಲ್ಲೂ ಭೋಟೆ ಕೋಶಿ ನದಿಯ ಉದ್ದಕ್ಕೂ ವಾಸಿಸುವ ನಿವಾಸಿಗಳು ಹೆಚ್ಚಿನ ನಿಗಾ ವಹಿಸುವಂತೆ ಸಲಹೆ ನೀಡಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಮಾರು 1,000 ಜನರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ಶಂಕಿಸಲಾಗಿದೆ. ಈ ಅಂಕಿ ಅಂಶ ಇನ್ನೂ ಅಧಿಕೃತವಾಗಿಲ್ಲ. ರಕ್ಷಣಾ ತಂಡಗಳು ಈಗಾಗಲೇ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ನಡೆಸುತ್ತಿವೆ. ಹೀಗಾಗಿ ಸಾವು ನೋವುಗಳು ಇನ್ನೂ ಸ್ಪಷ್ಟವಾಗಿ ತಿಳುಬಂದಿಲ್ಲ.
ರಸುವಾ ಜಿಲ್ಲೆಯಲ್ಲಿ ಉಂಟಾದ ಹಠಾತ್ ಪ್ರವಾಹವು ಇಲ್ಲಿನ ಹಲವು ಪ್ರದೇಶಗಳಲ್ಲಿ ವ್ಯಾಪಕ ಹಾನಿಯನ್ನುಂಟುಮಾಡಿದೆ. ಸಯಾಪ್ರು ಬೆಸಿ ಮತ್ತು ತಿಮುರೆ ಪರ್ವತ ಪ್ರದೇಶಗಳು ತೀವ್ರವಾಗಿ ಪರಿಣಾಮ ಬೀರಿವೆ. ಇಲ್ಲಿನ ಕೆಲವು ಹಳ್ಳಿಗಳೇ ಕೊಚ್ಚಿಹೋಗಿವೆ. ಯೋಜನಾ ಸ್ಥಳಗಳೂ ಕೊಚ್ಚಿ ಹೋಗಿವೆ ಎಂದು ವರದಿಯಾಗಿದೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ನೀರಿನ ರಭಸಕ್ಕೆ ಸಿಕ್ಕಿ ಕೊಚ್ಚಿಹೋಗಿರುವ ಜನರ ಹುಟುಕಾಡ ನಡೆಸುತ್ತಿವೆ. ಪರಿಸ್ಥಿತಿ ತೀರ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿ ಮೂಲಕ ತಿಳಿದುಬಂದಿದೆ.








