- Advertisement -
- Advertisement -
ವಿಟ್ಲ: ಧರ್ಮಸ್ಥಳದಲ್ಲಿ ಭೀಕರವಾಗಿ ಅತ್ಯಾಚಾರವಾಗಿ ಕೊಲೆಯಾದ ಸೌಜನ್ಯ ಸಾವಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ, ನೈಜ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹಿಸಿ ಹಿಂದೂ ಹೋರಾಟ ಸಮಿತಿ ವಿಟ್ಲ ತಾಲೂಕು ವತಿಯಿಂದ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ.
ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಆ. 20ರಂದು ಬೆಳಿಗ್ಗೆ 10ಗಂಟೆಯಿಂದ ವಿಟ್ಲ ಜಂಕ್ಷನ್ನಲ್ಲಿ ಪ್ರತಿಭಟನೆ ನಡೆಯಲಿದೆ. ಪ್ರತಿಯೊಂದು ಗ್ರಾಮದಿಂದ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ ಸಹೋದರಿ ಸೌಜನ್ಯಳ ಸಾವಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಕಾನೂನು ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -