Friday, May 23, 2025
spot_imgspot_img
spot_imgspot_img

(ಮೇ. 2-3-4) ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಅತಿಮಹಾರುದ್ರಯಾಗ

- Advertisement -
- Advertisement -

ಮೊಗರ್ನಾಡು ಸಾವಿರ ಸೀಮೆಯ ನಿಟಿಲಾಪುರದ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ವಠಾರದಲ್ಲಿ ಶ್ರೀಮದ್ ಕಾಶಿಜ್ಞಾನ ಸಿಂಹಸನಾಧೀಶ್ವರ ಶ್ರೀ 1008 ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಕಾಶೀ ಪೀಠ ವಾರಣಾಸಿ ಇವರ ಸಾನಿಧ್ಯದಲ್ಲಿ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಸಮಸ್ತ ಸಂಸ್ಥಾನದ ಮಠಾಧೀಶರುಗಳ ದಿವ್ಯ ಉಪಸ್ಥಿತಿಯಲ್ಲಿ ವಿವಿಧ ಪುಣ್ಯಕ್ಷೇತ್ರಗಳ ಧರ್ಮಾಧಿಕಾರಿಗಳು, ಧಾರ್ಮಿಕ ಮುಖಂಡರುಗಳ ಮತ್ತು ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಲೋಕಕಲ್ಯಾಣಾರ್ಥವಾಗಿ ಅತಿಮಹಾರುದ್ರಯಾಗವು ಮೇ. 2-5-2025ನೇ ಶುಕ್ರವಾರದಿಂದ 4-5-2025ನೇ ಆದಿತ್ಯವಾರದವರೆಗೆ ನಡೆಯಲಿದೆ.

ದಿನಾಂಕ: 2-05-2025ನೇ ಶುಕ್ರವಾರ ಬೆಳಿಗ್ಗೆ 9.00ಕ್ಕೆ ಗಣಪತಿ ಹವನ, ನಿಟಿಲಾಕ್ಷ ಸದಾಶಿವ ದೇವರಿಗೆ ಶತರುದ್ರಾಭಿಷೇಕ, ಕಲಶ ಪ್ರತಿಷ್ಠೆ, ಪರಿವಾರ ದೇವತೆಗಳಿಗೆ ಕಲಶ ಪ್ರತಿಷ್ಠೆ, ಶತರುದ್ರ ಪಾರಾಯಣ, ಕಲಶಾಭಿಷೇಕ ನಡೆದು ಮಧ್ಯಾಹ್ನ 12.30 ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಾಯಂಕಾಲ 6ರಿಂದ ದೇವತಾ ಪ್ರಾರ್ಥನೆ, ಯಾಗ ಮಂಟಪದಲ್ಲಿ ತೋರಣ ಮುಹೂರ್ತ, ವಾಸ್ತು ರಕ್ಷೋಘ್ನ ಹೋಮ, ಶ್ರೀ ನಿಟಿಲಾಕ್ಷ ಸದಾಶಿವ ದೇವರಿಗೆ ರಂಗ ಪೂಜೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮ ರಾತ್ರಿ 8.00ಕ್ಕೆ ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದರು ಮಂಜೇಶ್ವರ ಅಭಿನಯಿಸುವ “ಕಲ್ಜಿಗದು ಮಾಯ್ಕಾರೆ ಪಂಜುರ್ಲಿ” ತುಳು ಪೌರಾಣಿಕ ಮತ್ತು ಭಕ್ತಿ ಪ್ರಧಾನ ಸಾಮಾಜಿಕ ನಾಟಕ ನಡೆಯಲಿದೆ.

ದಿನಾಂಕ: 3-05-2025ನೇ ಶನಿವಾರ ಬೆಳಿಗ್ಗೆ 6.00ರಿಂದ ಸಂಜೆ 6.00ರ ತನಕ ವಿವಿಧ ತಂಡದಿಂದ ಭಜನೆ ನಡೆಯಲಿದೆ. ಬೆಳಿಗ್ಗೆ 8 ರಿಂದ ಪುಣ್ಯಾಹ ನಾಂದಿ, ಮಹಾಸಂಕಲ್ಪ, ಅರಣಿಮಥನ, ಅಗ್ನಿಜನನ, ಬ್ರಹ್ಮ ಕೂರ್ಚ ಹೋಮ, ಮಹಾಗಣಪತಿ ಹೋಮ, ಪವಮಾನ ಪ್ರಯಾಶ್ಚಿತ ಹೋಮ, ಕೂಶ್ಚಾಂಡ ಹೋಮ, ಗ್ರಹಶಾಂತಿ ಹೋಮ, ಪಂಚದುರ್ಗ ಹೋಮ, ಮಂಟಪ ಸಂಸ್ಕಾರ ನಡೆಯಲಿದೆ. ಮಧ್ಯಾಹ್ನ 12:30ಕ್ಕೆ ಮಹಾಪೂಜೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 4ಕ್ಕೆ ಕಲ್ಲಡ್ಕ ಪೇಟೆಯಿಂದ ಹಸಿರು ಹೊರೆಕಾಣಿಕೆಯ ಶೋಭಾಯಾತ್ರೆ ಮತ್ತು ಶ್ರೀ 1008 ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಆಗಮನ. ಬಳಿಕ ಲಿಂಗತೋಭದ್ರ ಮಂಡಲ ಪೂಜೆ, ಕಲಶ ಪ್ರತಿಷ್ಠೆ, ಶತರುದ್ರ ಪಾರಾಯಣ, ಅಷ್ಟಾವಧಾನ ನಡೆಯಲಿದೆ. ರಾತ್ರಿ 8.00ಕ್ಕೆ ಜಗದೀಶ್ ಆಚಾರ್ಯ ಪುತ್ತೂರು ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ದಿನಾಂಕ: 4-05-2025ನೇ ಆದಿತ್ಯವಾರ ಬೆಳಿಗ್ಗೆ 5.00ರಿಂದ ಅತಿಮಹಾರುದ್ರಯಾಗದ ಪ್ರಾರಂಭ. ಬೆಳಿಗ್ಗೆ 11.00ಕ್ಕೆ ಪೂರ್ಣಾಹುತಿ, ಮಹಾಪೂಜೆ, ಕಲಶಾಭಿಷೇಕ, ಮಹಾಮಂತ್ರಾಕ್ಷತೆ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಮಹಾ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 6.00ಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ.

- Advertisement -

Related news

error: Content is protected !!