Sunday, July 6, 2025
spot_imgspot_img
spot_imgspot_img

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಸಂಸದ ಕ್ಯಾ. ಬ್ರಿಜೇಶ್ ಚೌಟ

- Advertisement -
- Advertisement -

ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ತಂದೆ-ತಾಯಿ ಜತೆಗೆ ನಿನ್ನೆ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಭೇಟಿ ಬಳಿಕ ಪ್ರತಿಕ್ರಿಯಿಸಿರುವ ಸಂಸದ ಕ್ಯಾ ಚೌಟ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನನ್ನ ಹೆತ್ತವರ ಜತೆಗೆ ಭೇಟಿ ಮಾಡುವ ಅವಕಾಶ ಲಭಿಸಿರುವುದು ಬದುಕಿನಲ್ಲಿನ ಬಹಳ ಖುಷಿಯ ಹಾಗೂ ಸಂತೃಪ್ತಿಯ ಭಾವವನ್ನು ಮೂಡಿಸಿದೆ.

ಅವರೊಂದಿಗಿನ ಈ ಭೇಟಿ ವೇಳೆ ಹಲವು ವಿಚಾರಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿಯೂ ನಮ್ಮ ಕರಾವಳಿ ಬಗೆಗಿನ ಕಲೆ-ಸಂಸ್ಕೃತಿ, ಪರಂಪರೆ ಬಗ್ಗೆ ಅವರಿಗಿರುವ ಅಗಾಧ ಜ್ಞಾನವು ನನಗೆ ಬಹಳ ಸ್ಫೂರ್ತಿ ಹಾಗೂ ಹೆಮ್ಮೆಯ ಕ್ಷಣವಾಗಿ ಬಹಳ ಕಾಲ ನೆನೆಪಿನಲ್ಲಿ ಉಳಿಯುವಂತೆ ಮಾಡಿದೆ. ವಿಶ್ವದ ಮಹಾನ್ ನಾಯಕರಾಗಿರುವ ಮೋದಿ ಅವರು ನನ್ನ ಬೆನ್ನುತಟ್ಟಿ ನೀಡಿದ ಪ್ರೋತ್ಸಾಹದಾಯಕ ಮಾತುಗಳನ್ನು ನನಗೆ ಜನಸೇವೆಗೆ ಮತ್ತಷ್ಟು ಸ್ಫೂರ್ತಿಯನ್ನು ನೀಡಿದೆ ಎಂದಿದ್ದಾರೆ.

- Advertisement -

Related news

error: Content is protected !!