Friday, May 3, 2024
spot_imgspot_img
spot_imgspot_img

ಪ್ರಧಾನ ಮಂತ್ರಿಗಳ ಸಾಧನೆಯನ್ನು ಜನರಿಗೆ ತಿಳಿಸುವ ಕೆಲಸ ಆಗಬೇಕು-ಸಂಜೀವ ಮಠಂದೂರು.

- Advertisement -G L Acharya panikkar
- Advertisement -

ಪಕ್ಷಕ್ಕೆ ಯಾರನ್ನೂ ಸೇರಿಸಿದರು ಪುತ್ತೂರು ಬಿಜೆಪಿ ಮುಕ್ತವಾಗಿ ಸ್ವಾಗತಿಸುತ್ತದೆ-ಸಾಜ ರಾಧಕೃಷ್ಣ ಆಳ್ವ

ವಿಟ್ಲ: ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ 9ವರ್ಷ ಪೂರೈಸಿದ ಸಾಧನೆಯ ಸಂಭ್ರಮವನ್ನು ಜನರಿಗೆ ತಲುಪಿಸಲು ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಪುಣಚ ಮಹಾಶಕ್ತಿ ಕೇಂದ್ರದ ಸಭೆಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರುರವರು ಹೇಳಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವರವರು ಮಾತನಾಡಿ ಪ್ರತಿ ಬೂತ್‌ನಲ್ಲಿ ಪಕ್ಷವನ್ನು ಬಲಪಡಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಂಘಟಿತ ಪ್ರಯತ್ನ ಮಾಡಬೇಕು ಎಂದು ಹೇಳಿದರು ಹಾಗೂ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಕೆಲವು ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಪುತ್ತೂರು ಬಿಜೆಪಿ ವಿರೋಧ ಇದೆ ಎಂದು ಹರಿದಾಡುತ್ತಿದೆ ಇದು ಸತ್ಯಕ್ಕೆ ದೂರವಾದ ವಿಚಾರ ಪಾರ್ಟಿಯ ಸಿದ್ಧಾಂತದ ಅಡಿಯಲ್ಲಿ ಯಾರು ಬಂದರೂ ಪುತ್ತೂರು ಬಿಜೆಪಿ ಮುಕ್ತವಾಗಿ ಸ್ವಾಗತಿಸುತ್ತದೆ ಮತ್ತು ನಮ್ಮ ತೀರ್ಮಾನವನ್ನು ಈಗಾಗಲೇ ಜಿಲ್ಲೆ ರಾಜ್ಯದ ನಾಯಕರಿಗೆ, ಹಿರಿಯರಿಗೆ ತಿಳಿಸಿದ್ದೇವೆ ಅವರು ಕೈಗೊಳ್ಳುವ ಯಾವುದೇ ನಿರ್ಧಾರಕ್ಕೆ ಪುತ್ತೂರು ಬಿಜೆಪಿ ಬದ್ಧವಾಗಿರುತ್ತದೆ ಎಂದು ಸಭೆಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಪುಣಚ ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಹಾಗೂ ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್ ಪುಣಚ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ದಯಾನಂದ ಶೆಟ್ಟಿ, ಶಕ್ತಿ ಕೇಂದ್ರ ಸಂಚಾಲಕರು, ಮೋರ್ಚ ಪ್ರಮುಖರು, ಪ್ರಕೋಷ್ಟ ಸಂಚಾಲಕರು, ಜನಪ್ರತಿನಿಧಿಗಳು, ಮಹಾಶಕ್ತಿ ಕೇಂದ್ರ ಸದಸ್ಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!