- Advertisement -
- Advertisement -
ಬಂಟ್ವಾಳ: ಇಲ್ಲಿನ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೆಲ್ಕಾರ್ ನಲ್ಲಿ ಕಂಟೈನರ್ ಲಾರಿ ಹಾಗೂ ಬೈಕ್ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಅ. 31 ರ ರಾತ್ರಿ ಸಂಭವಿಸಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಪಂಜಾಜೆ ನಿವಾಸಿ ತಿಲಕ್(29) ಎನ್ನಲಾಗಿದೆ.
ಕಂಟೈನರ್ ಲಾರಿ ಹಾಗೂ ಬೈಕ್ ನಡುವಿನ ಡಿಕ್ಕಿಯ ರಭಸಕ್ಕೆ ತಿಲಕ್ ರವರು ಗಂಭೀರವಾಗಿ ಗಾಯಗೊಂಡಿದ್ದು , ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ, ಅದಾಗಲೇ ಅವರು ಮೃತಪಟ್ಟಿದ್ದರು ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಈ ಘಟನೆ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -