Wednesday, April 24, 2024
spot_imgspot_img
spot_imgspot_img

ಮಾನಸಿಕ ಅಸ್ವಸ್ಥ ಯುವಕನ ಮೇಲೆ ಶಿಕ್ಷಕನಿಂದ ಲೈಂಗಿಕ ಕಿರುಕುಳ

- Advertisement -G L Acharya panikkar
- Advertisement -

ಬೆಂಗಳೂರು: ಮಾರ್ಗದರ್ಶನ ತೋರಬೇಕಿದ್ದ ಶಿಕ್ಷಕನೊಬ್ಬ ಯುವಕನಿಗೆ ಕಾಮುಕನಾಗಿ ಕಾಡಿದ ಘಟನೆ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಯುವಕನಿಗೆ ನೀಲಿಚಿತ್ರ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ದಾಬಸ್‌ಪೇಟೆ ಪೊಲೀಸರು ಕಾಮುಕ ಶಿಕ್ಷಕನನ್ನು ಅರೆಸ್ಟ್ ಮಾಡಿದ್ದಾರೆ. ಶಿಕ್ಷಕ ನೀಲಿ ಚಿತ್ರ ತೋರಿಸಿ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅರೋಪ ಕೇಳಿಬಂದಿದೆ.

ಲೈಂಗಿಕ ದೌರ್ಜನ್ಯ ಅರೋಪ ಹಿನ್ನೆಲೆ ರಂಗನಾಥ್ ಎಂಬ ಮುಖ್ಯೋಪಾಧ್ಯಾಯನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಾನಸಿಕ ಅಸ್ವಸ್ಥ ಮಕ್ಕಳ ಧರಿತ್ರಿ ಸಂಸ್ಥೆ ನರಸೀಪುರದಲ್ಲಿ ಮೇ 6 ಮತ್ತು 7 ರಂದು ಕೃತ್ಯ ನಡೆದಿರುವುದಾಗಿ ತಿಳಿದುಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಎರಡು ದಿನಗಳ ಕಾಲ 21 ವಯಸ್ಸಿನ ಮಾನಸಿಕ ಅಸ್ವಸ್ಥ ಯುವಕನ ಮೇಲೆ ದೌರ್ಜನ್ಯ ನಡೆದಿದೆ ಎಂದು ಆರೋಪಿಸಲಾಗಿದೆ.

ಜೂನ್ 15ರಂದು ದಾಬಸ್ ಪೇಟೆ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಐಪಿಸಿ ಕಲಂ 377, 506 ರೀತ್ಯಾ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ. ಧರಿತ್ರಿ ಸಂಸ್ಥೆಯ ಕಾರ್ಯದರ್ಶಿ ಶ್ರೀಕಾಂತ್ ಬೆಟ್ಟಗೇರಿ ಅವರು ಮುಖ್ಯೋಪಾಧ್ಯಾಯ ರಂಗನಾಥ್ ಮೇಲೆ ದೂರು ನೀಡಿದ್ದಾರೆ.

- Advertisement -

Related news

error: Content is protected !!