Saturday, June 20, 2026
spot_imgspot_img
spot_imgspot_img

ಹಾಲಿನಲ್ಲಿ ಕಲಬೆರಕೆ ಶಂಕೆ; ಗಡಿಭಾಗಗಳಲ್ಲಿ ಮಾದರಿ ಸಂಗ್ರಹ, ತೀವ್ರ ತಪಾಸಣೆ

- Advertisement -
- Advertisement -

ಬೆಂಗಳೂರು: ಹಾಲಿನ ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದ್ದಂತೆ ಆಹಾರ ಸುರಕ್ಷತಾ ಇಲಾಖೆ ಎಚ್ಚರ ವಹಿಸಿದೆ. ಅಧಿಕಾರಿಗಳು ವಿವಿಧ ಗಡಿಭಾಗಗಳಲ್ಲಿ ತಪಾಸಣೆ ನಡೆಸಿ ಹಾಲಿನ ಮಾದರಿಗಳನ್ನು ಸಂಗ್ರಹಿಸಿದ್ದಾರೆ.

ಹಾಲಿನ ಗುಣಮಟ್ಟ ಪರಿಶೀಲನೆಗಾಗಿ ಹೊಸೂರು, ಚಾಮರಾಜನಗರ ಹಾಗೂ ಮೈಸೂರು ಗಡಿಭಾಗಗಳಲ್ಲಿ ತಪಾಸಣೆ ನಡೆಸಲಾಗಿದೆ. ಖಾಸಗಿ ಒಡೆತನದ ಹಾಲಿನ ಟ್ಯಾಂಕರ್‌ಗಳನ್ನು ತಡೆದು ಮಾದರಿಗಳನ್ನು ಸಂಗ್ರಹಿಸಲಾಗಿದೆ.

ದೊಡ್ಲಾ ಸೇರಿದಂತೆ ವಿವಿಧ ಕಂಪನಿಗಳ ಹಾಲಿನ ಟ್ಯಾಂಕರ್‌ಗಳಿಂದ ಸ್ಯಾಂಪಲ್‌ಗಳನ್ನು ಪಡೆಯಲಾಗಿದೆ. ಸಂಗ್ರಹಿಸಿದ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಹಾಲಿನಲ್ಲಿ ಕಲಬೆರಕೆ ನಡೆಯುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಇಲಾಖೆ ಈ ಕ್ರಮ ಕೈಗೊಂಡಿದೆ. ಪರೀಕ್ಷಾ ವರದಿ ಬಂದ ಬಳಿಕ ಹಾಲಿನ ಗುಣಮಟ್ಟದ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ.

ರಾಜ್ಯ ಸರ್ಕಾರ ಹಾಲಿನ ಗುಣಮಟ್ಟದ ಮೇಲ್ವಿಚಾರಣೆಗೆ ಒತ್ತು ನೀಡಿದ್ದು, ಕಲಬೆರಕೆ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಹೀಗಾಗಿ ಗ್ರಾಹಕರ ಆರೋಗ್ಯ ರಕ್ಷಣೆಗೆ ಇಲಾಖೆ ಕಟ್ಟುನಿಟ್ಟಿನ ಪರಿಶೀಲನೆ ನಡೆಸುತ್ತಿದೆ.

- Advertisement -

Related news

error: Content is protected !!