Saturday, June 28, 2025
spot_imgspot_img
spot_imgspot_img

ಪುತ್ತೂರು : ಉದ್ಯಮಿಯೊಬ್ಬರಿಗೆ ಆನ್ ಲೈನ್‌ನಲ್ಲಿ ಲಕ್ಷಾಂತರ ರೂ. ವಂಚನೆ : ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ಪುತ್ತೂರು : ಪುತ್ತೂರಿನ ಉದ್ಯಮಿಯೊಬ್ಬರಿಗೆ ಆನ್ ಲೈನ್ ವಂಚಕರು ಭಾರೀ ವಂಚನೆ ಮಾಡಿದ್ದು,ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಣೇಶ್ ಪ್ರಭು (40) ಎಂಬವರು ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ, ಅಗ್ರೋ ಉತ್ಪನ್ನಗಳನ್ನು ಕೃಷಿಕರಿಗೆ ಮಾರಾಟ ಮಾಡುತ್ತಿದ್ದು, Unity Poly Barrels PVT Ltd Ashoka Nagar Shivaji Nagar Pune Maharsasthra ಎಂಬ ಹೆಸರಿನಿಂದ ಗಣೇಶ್ ಪ್ರಭುರನ್ನು ಸಂಪರ್ಕಿಸಿದ ಅಪರಿಚಿತ ಆರೋಪಿಗಳು, ಆನ್ ಲೈನ್ ಮುಖಾಂತರ ಡ್ರಮ್ ಉತ್ಪನ್ನಗಳನ್ನು ಮಾರಾಟ ಮಾಡುತ್ತೇನೆಂದು ಹೇಳಿ ದಿನಾಂಕ: 08.05.2024 ರಿಂದ ದಿನಾಂಕ: 10.05.2024 ರ ಮಧ್ಯಾಹ್ನ ಅವಧಿಯಲ್ಲಿ, ಗಣೇಶ್ ಪ್ರಭು ಅವರಿಂದ ರೂ 1,30,500 /- ಹಣವನ್ನು ಮೂರು ಹಂತಗಳಲ್ಲಿ ಫೋನ್ ಪೇ ಮೂಲಕ ಹಾಕಿಸಿಕೊಂಡು ಈವರೆಗೆ ಡ್ರಮ್ ಮೆಟಿರಿಯಲ್ ಗಳನ್ನು ಕಳುಹಿಸಿಕೊಟ್ಟಿರುವುದಿಲ್ಲ ಎಂಬುದಾಗಿ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ:58/2024, ಕಲಂ: 420 ಭಾ.ದಂ.ಸಂ ಮತ್ತು ಕಲಂ:-66(c),66(D))IT Act ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!